September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಲ್ ಕೊಯ್ಯೂರು ಇಲ್ಲಿಯ ಸದಸ್ಯರ ಕುಣಿತ ಭಜನೆಯಲ್ಲಿ ಕೆಲವೊಂದು ಸಣ್ಣಪುಟ್ಟ ಬದಲಾವಣೆಗಳನ್ನು ತಂದು ಕುಣಿತದಲ್ಲಿ ಒಂದು ಮಾದರಿ ತಂಡವನ್ನಾಗಿ ರೂಪಿಸಬೇಕೆನ್ನುವ ಉದ್ದೇಶದಿಂದ ಭಜನಾ ಮಂಡಳಿಯ ಹಿರಿಯ ಕಿರಿಯ ಸದಸ್ಯರುಗಳಿಗೆ ಮತ್ತು ಮಕ್ಕಳಿಗೆ ಕುಣಿತ ಭಜನೆಯ ಹೊಸ ತರಬೇತಿಯನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಣಿತ ಭಜನೆಯ ಗುರುಗಳಾದ ಸಂದೇಶ ಹಾಗೂ ಊರಿನ ಹಿರಿಯರು ಪ್ರಚಂಡಭಾನು ಭಟ್ ಪಾಂಬೆಲು ಇವರುಗಳು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿಗಳು, ಭಜನಾ ಮಂಡಳಿಯ ಅಧ್ಯಕ್ಷರು, ಗೌರವಾಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಕೋಶಾಧಿಕಾರಿಗಳು, ಭಜಕ ಆಸಕ್ತ ಸದಸ್ಯರುಗಳು ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಮುಂಡಾಜೆ ಯುವವಾಹಿನಿ ಸಂಚಲನಾ ಸಮಿತಿಯ ಪದಗ್ರಹಣ, ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya
error: Content is protected !!