September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ತೆಂಕಕಾರಂದೂರು : ಮಾ.5 ರಂದು ಕಾಪಿನಡ್ಕ ಸ.ಕಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯಾನ್ ನೆರವೇರಿಸಿ ಶುಭ ಹಾರೈಸಿದರು. ನಾರಾವಿ ಮತ್ತು ಪೆರೋಡಿತ್ತಾಯ ಕಟ್ಟೆ ಕ್ಲಸ್ಟರ್ ನ ಸಿ.ಆರ್.ಪಿ ಕಿರಣ್ ಮೆಟ್ರಿಕ್ ಮೇಳದ ಉದ್ದೇಶ ಮತ್ತು ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಗೆಳೆಯರ ಬಳಗದ ಅಧ್ಯಕ್ಷ ಪ್ರವೀಣ್ ಮತ್ತು ಸದಸ್ಯ ಪ್ರದೀಪ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶಾಂತಿವಾಸ್ ಉಪಸ್ಥಿತರಿದ್ದರು.

ಮಕ್ಕಳು, ಪೋಷಕರ ಸಹಕಾರದೊಂದಿಗೆ ತರಕಾರಿ, ಹಣ್ಣುಗಳು, ಪಾನೀಯಗಳು, ಐಸ್ ಕ್ರೀಮ್, ಅದೃಷ್ಟ ಚೀಟಿ ಆಟ, ಜೇನು ತುಪ್ಪ, ಉತ್ಪನ್ನ ವಸ್ತುಗಳು, ಲೇಖನ ಸಾಮಾಗ್ರಿ ಇತ್ಯಾದಿಗಳನ್ನು ಮಾರಾಟ ಮಾಡಿದರು. ಸಿಕ್ಕಿದ ಮೊತ್ತವನ್ನು ಎಲ್ಲಾ ಪೋಷಕರು ಶಾಲೆಗೆ ನೀಡುವುದೆಂದು ತೀರ್ಮಾನಿಸಿದರು. ಊರ ವಿದ್ಯಾಭಿಮಾನಿಗಳು ಕ್ಲಸ್ಟರ್ ಶಾಲೆಗಳ ಶಿಕ್ಷಕ ವೃಂದದವರು ಮೆಟ್ರಿಕ್ ಮೇಳದಲ್ಲಿ ಭಾಗವಹಿಸಿ ಆರ್ಥಿಕ ಸಹಕಾರವನ್ನು ನೀಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಮೆಟ್ರಿಕ್ ಮೇಳದಿಂದ ದೊರೆತ ಮೊತ್ತವನ್ನು ಶಾಲಾ ಅಕ್ಷರ ದಾಸೋಹ ಕೊಠಡಿಯ ಮೇಲ್ಚಾವಣಿಗೆ ಶೀಟ್ ಅಳವಡಿಸಲು ಉಪಯೋಗಿಸುವಂತೆ ತೀರ್ಮಾನಿಸಲಾಯಿತು. ಶಿಕ್ಷಕಿ ಕು. ಅನುಷಾ ನಿರೂಪಿಸಿ, ಶಿಕ್ಷಕಿ ಅನಿತಾ ವಂದಿಸಿದರು.

Related posts

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂಗಾಡಿ ಸ.ಉ.ಪ್ರಾ. ಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya
error: Content is protected !!