25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

ಇಂದಬೆಟ್ಟು : ಇಲ್ಲಿಯ ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆಯು ಮಾ.4ರಿಂದ ಪ್ರಾರಂಭಗೊಂಡು ಮಾ7ರವರೆಗೆ ವೇದಮೂರ್ತಿ ಶ್ರೀಕಾಂತ ಭಟ್ ಬೆಳುವಾಯಿ ಇವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಮಾ.4ರಂದು ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ತೊಡರ ಬಲಿ, ಉಗ್ರಾಣ ಮೂಹೂರ್ತ ನಡೆಯಿತು. ಮಾ.5ರಂದು ಬೆಳಿಗ್ಗೆ ಉಳ್ಳಾಕುಳ ಸನ್ನಿಧಿಯಲ್ಲಿ ನವಕ ಕಲಶ, ಪ್ರಧಾನ ಹೋಮ, ಧ್ವಜಾರೋಹಣ, ಕಲಶಾಭಿಷೇಕ, ಪಂಚವರ್ಣ ಸಂಕ್ರಾಂತಿ 12 ತೆಂಗಿನಕಾಯಿಗಳ ಗಣಹೋಮ, ಚಂಡಿಕಾ ಯಾಗ, ಮಹಾಪೂಜೆ, ನಂತರ ಅನ್ನಸಂತರ್ಪಣೆಯು ನಡೆಯಿತು.

ರಾತ್ರಿ ಉಳ್ಳಾಳ್ತಿ ಸನ್ನಿಧಿಯಲ್ಲಿ ಹೂವಿನ ಪೂಜೆ, ಉಳ್ಳಾಯ-ಉಳ್ಳಾಲ್ತಿ ನೇಮೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಅನುವಂಶಿಕ ಅಸ್ರಣ್ಣರು ಮತ್ತು ಪ್ರಧಾನ ಅರ್ಚಕ ಎಸ್. ಗೋಪಾಲಕೃಷ್ಣ ಉಪಾಧ್ಯಾಯ, ಆಡಳಿತ ಅಧಿಕಾರಿ ಗಿರಿಯಪ್ಪ ಗೌಡ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

Suddi Udaya

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya
error: Content is protected !!