23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಲ್ ಕೊಯ್ಯೂರು ಇಲ್ಲಿಯ ಸದಸ್ಯರ ಕುಣಿತ ಭಜನೆಯಲ್ಲಿ ಕೆಲವೊಂದು ಸಣ್ಣಪುಟ್ಟ ಬದಲಾವಣೆಗಳನ್ನು ತಂದು ಕುಣಿತದಲ್ಲಿ ಒಂದು ಮಾದರಿ ತಂಡವನ್ನಾಗಿ ರೂಪಿಸಬೇಕೆನ್ನುವ ಉದ್ದೇಶದಿಂದ ಭಜನಾ ಮಂಡಳಿಯ ಹಿರಿಯ ಕಿರಿಯ ಸದಸ್ಯರುಗಳಿಗೆ ಮತ್ತು ಮಕ್ಕಳಿಗೆ ಕುಣಿತ ಭಜನೆಯ ಹೊಸ ತರಬೇತಿಯನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಣಿತ ಭಜನೆಯ ಗುರುಗಳಾದ ಸಂದೇಶ ಹಾಗೂ ಊರಿನ ಹಿರಿಯರು ಪ್ರಚಂಡಭಾನು ಭಟ್ ಪಾಂಬೆಲು ಇವರುಗಳು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿಗಳು, ಭಜನಾ ಮಂಡಳಿಯ ಅಧ್ಯಕ್ಷರು, ಗೌರವಾಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಕೋಶಾಧಿಕಾರಿಗಳು, ಭಜಕ ಆಸಕ್ತ ಸದಸ್ಯರುಗಳು ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

Related posts

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya
error: Content is protected !!