September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಲ್ ಕೊಯ್ಯೂರು ಇಲ್ಲಿಯ ಸದಸ್ಯರ ಕುಣಿತ ಭಜನೆಯಲ್ಲಿ ಕೆಲವೊಂದು ಸಣ್ಣಪುಟ್ಟ ಬದಲಾವಣೆಗಳನ್ನು ತಂದು ಕುಣಿತದಲ್ಲಿ ಒಂದು ಮಾದರಿ ತಂಡವನ್ನಾಗಿ ರೂಪಿಸಬೇಕೆನ್ನುವ ಉದ್ದೇಶದಿಂದ ಭಜನಾ ಮಂಡಳಿಯ ಹಿರಿಯ ಕಿರಿಯ ಸದಸ್ಯರುಗಳಿಗೆ ಮತ್ತು ಮಕ್ಕಳಿಗೆ ಕುಣಿತ ಭಜನೆಯ ಹೊಸ ತರಬೇತಿಯನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಣಿತ ಭಜನೆಯ ಗುರುಗಳಾದ ಸಂದೇಶ ಹಾಗೂ ಊರಿನ ಹಿರಿಯರು ಪ್ರಚಂಡಭಾನು ಭಟ್ ಪಾಂಬೆಲು ಇವರುಗಳು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿಗಳು, ಭಜನಾ ಮಂಡಳಿಯ ಅಧ್ಯಕ್ಷರು, ಗೌರವಾಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಕೋಶಾಧಿಕಾರಿಗಳು, ಭಜಕ ಆಸಕ್ತ ಸದಸ್ಯರುಗಳು ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

Related posts

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

Suddi Udaya

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!