April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ತೆಂಕಕಾರಂದೂರು : ಮಾ.5 ರಂದು ಕಾಪಿನಡ್ಕ ಸ.ಕಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯಾನ್ ನೆರವೇರಿಸಿ ಶುಭ ಹಾರೈಸಿದರು. ನಾರಾವಿ ಮತ್ತು ಪೆರೋಡಿತ್ತಾಯ ಕಟ್ಟೆ ಕ್ಲಸ್ಟರ್ ನ ಸಿ.ಆರ್.ಪಿ ಕಿರಣ್ ಮೆಟ್ರಿಕ್ ಮೇಳದ ಉದ್ದೇಶ ಮತ್ತು ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಗೆಳೆಯರ ಬಳಗದ ಅಧ್ಯಕ್ಷ ಪ್ರವೀಣ್ ಮತ್ತು ಸದಸ್ಯ ಪ್ರದೀಪ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶಾಂತಿವಾಸ್ ಉಪಸ್ಥಿತರಿದ್ದರು.

ಮಕ್ಕಳು, ಪೋಷಕರ ಸಹಕಾರದೊಂದಿಗೆ ತರಕಾರಿ, ಹಣ್ಣುಗಳು, ಪಾನೀಯಗಳು, ಐಸ್ ಕ್ರೀಮ್, ಅದೃಷ್ಟ ಚೀಟಿ ಆಟ, ಜೇನು ತುಪ್ಪ, ಉತ್ಪನ್ನ ವಸ್ತುಗಳು, ಲೇಖನ ಸಾಮಾಗ್ರಿ ಇತ್ಯಾದಿಗಳನ್ನು ಮಾರಾಟ ಮಾಡಿದರು. ಸಿಕ್ಕಿದ ಮೊತ್ತವನ್ನು ಎಲ್ಲಾ ಪೋಷಕರು ಶಾಲೆಗೆ ನೀಡುವುದೆಂದು ತೀರ್ಮಾನಿಸಿದರು. ಊರ ವಿದ್ಯಾಭಿಮಾನಿಗಳು ಕ್ಲಸ್ಟರ್ ಶಾಲೆಗಳ ಶಿಕ್ಷಕ ವೃಂದದವರು ಮೆಟ್ರಿಕ್ ಮೇಳದಲ್ಲಿ ಭಾಗವಹಿಸಿ ಆರ್ಥಿಕ ಸಹಕಾರವನ್ನು ನೀಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಮೆಟ್ರಿಕ್ ಮೇಳದಿಂದ ದೊರೆತ ಮೊತ್ತವನ್ನು ಶಾಲಾ ಅಕ್ಷರ ದಾಸೋಹ ಕೊಠಡಿಯ ಮೇಲ್ಚಾವಣಿಗೆ ಶೀಟ್ ಅಳವಡಿಸಲು ಉಪಯೋಗಿಸುವಂತೆ ತೀರ್ಮಾನಿಸಲಾಯಿತು. ಶಿಕ್ಷಕಿ ಕು. ಅನುಷಾ ನಿರೂಪಿಸಿ, ಶಿಕ್ಷಕಿ ಅನಿತಾ ವಂದಿಸಿದರು.

Related posts

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya
error: Content is protected !!