30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ತೆಂಕಕಾರಂದೂರು : ಮಾ.5 ರಂದು ಕಾಪಿನಡ್ಕ ಸ.ಕಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯಾನ್ ನೆರವೇರಿಸಿ ಶುಭ ಹಾರೈಸಿದರು. ನಾರಾವಿ ಮತ್ತು ಪೆರೋಡಿತ್ತಾಯ ಕಟ್ಟೆ ಕ್ಲಸ್ಟರ್ ನ ಸಿ.ಆರ್.ಪಿ ಕಿರಣ್ ಮೆಟ್ರಿಕ್ ಮೇಳದ ಉದ್ದೇಶ ಮತ್ತು ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಗೆಳೆಯರ ಬಳಗದ ಅಧ್ಯಕ್ಷ ಪ್ರವೀಣ್ ಮತ್ತು ಸದಸ್ಯ ಪ್ರದೀಪ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶಾಂತಿವಾಸ್ ಉಪಸ್ಥಿತರಿದ್ದರು.

ಮಕ್ಕಳು, ಪೋಷಕರ ಸಹಕಾರದೊಂದಿಗೆ ತರಕಾರಿ, ಹಣ್ಣುಗಳು, ಪಾನೀಯಗಳು, ಐಸ್ ಕ್ರೀಮ್, ಅದೃಷ್ಟ ಚೀಟಿ ಆಟ, ಜೇನು ತುಪ್ಪ, ಉತ್ಪನ್ನ ವಸ್ತುಗಳು, ಲೇಖನ ಸಾಮಾಗ್ರಿ ಇತ್ಯಾದಿಗಳನ್ನು ಮಾರಾಟ ಮಾಡಿದರು. ಸಿಕ್ಕಿದ ಮೊತ್ತವನ್ನು ಎಲ್ಲಾ ಪೋಷಕರು ಶಾಲೆಗೆ ನೀಡುವುದೆಂದು ತೀರ್ಮಾನಿಸಿದರು. ಊರ ವಿದ್ಯಾಭಿಮಾನಿಗಳು ಕ್ಲಸ್ಟರ್ ಶಾಲೆಗಳ ಶಿಕ್ಷಕ ವೃಂದದವರು ಮೆಟ್ರಿಕ್ ಮೇಳದಲ್ಲಿ ಭಾಗವಹಿಸಿ ಆರ್ಥಿಕ ಸಹಕಾರವನ್ನು ನೀಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಮೆಟ್ರಿಕ್ ಮೇಳದಿಂದ ದೊರೆತ ಮೊತ್ತವನ್ನು ಶಾಲಾ ಅಕ್ಷರ ದಾಸೋಹ ಕೊಠಡಿಯ ಮೇಲ್ಚಾವಣಿಗೆ ಶೀಟ್ ಅಳವಡಿಸಲು ಉಪಯೋಗಿಸುವಂತೆ ತೀರ್ಮಾನಿಸಲಾಯಿತು. ಶಿಕ್ಷಕಿ ಕು. ಅನುಷಾ ನಿರೂಪಿಸಿ, ಶಿಕ್ಷಕಿ ಅನಿತಾ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya
error: Content is protected !!