24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ತೆಂಕಕಾರಂದೂರು : ಮಾ.5 ರಂದು ಕಾಪಿನಡ್ಕ ಸ.ಕಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯಾನ್ ನೆರವೇರಿಸಿ ಶುಭ ಹಾರೈಸಿದರು. ನಾರಾವಿ ಮತ್ತು ಪೆರೋಡಿತ್ತಾಯ ಕಟ್ಟೆ ಕ್ಲಸ್ಟರ್ ನ ಸಿ.ಆರ್.ಪಿ ಕಿರಣ್ ಮೆಟ್ರಿಕ್ ಮೇಳದ ಉದ್ದೇಶ ಮತ್ತು ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಗೆಳೆಯರ ಬಳಗದ ಅಧ್ಯಕ್ಷ ಪ್ರವೀಣ್ ಮತ್ತು ಸದಸ್ಯ ಪ್ರದೀಪ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶಾಂತಿವಾಸ್ ಉಪಸ್ಥಿತರಿದ್ದರು.

ಮಕ್ಕಳು, ಪೋಷಕರ ಸಹಕಾರದೊಂದಿಗೆ ತರಕಾರಿ, ಹಣ್ಣುಗಳು, ಪಾನೀಯಗಳು, ಐಸ್ ಕ್ರೀಮ್, ಅದೃಷ್ಟ ಚೀಟಿ ಆಟ, ಜೇನು ತುಪ್ಪ, ಉತ್ಪನ್ನ ವಸ್ತುಗಳು, ಲೇಖನ ಸಾಮಾಗ್ರಿ ಇತ್ಯಾದಿಗಳನ್ನು ಮಾರಾಟ ಮಾಡಿದರು. ಸಿಕ್ಕಿದ ಮೊತ್ತವನ್ನು ಎಲ್ಲಾ ಪೋಷಕರು ಶಾಲೆಗೆ ನೀಡುವುದೆಂದು ತೀರ್ಮಾನಿಸಿದರು. ಊರ ವಿದ್ಯಾಭಿಮಾನಿಗಳು ಕ್ಲಸ್ಟರ್ ಶಾಲೆಗಳ ಶಿಕ್ಷಕ ವೃಂದದವರು ಮೆಟ್ರಿಕ್ ಮೇಳದಲ್ಲಿ ಭಾಗವಹಿಸಿ ಆರ್ಥಿಕ ಸಹಕಾರವನ್ನು ನೀಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಮೆಟ್ರಿಕ್ ಮೇಳದಿಂದ ದೊರೆತ ಮೊತ್ತವನ್ನು ಶಾಲಾ ಅಕ್ಷರ ದಾಸೋಹ ಕೊಠಡಿಯ ಮೇಲ್ಚಾವಣಿಗೆ ಶೀಟ್ ಅಳವಡಿಸಲು ಉಪಯೋಗಿಸುವಂತೆ ತೀರ್ಮಾನಿಸಲಾಯಿತು. ಶಿಕ್ಷಕಿ ಕು. ಅನುಷಾ ನಿರೂಪಿಸಿ, ಶಿಕ್ಷಕಿ ಅನಿತಾ ವಂದಿಸಿದರು.

Related posts

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya
error: Content is protected !!