22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ತೆಂಕಕಾರಂದೂರು : ಮಾ.5 ರಂದು ಕಾಪಿನಡ್ಕ ಸ.ಕಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯಾನ್ ನೆರವೇರಿಸಿ ಶುಭ ಹಾರೈಸಿದರು. ನಾರಾವಿ ಮತ್ತು ಪೆರೋಡಿತ್ತಾಯ ಕಟ್ಟೆ ಕ್ಲಸ್ಟರ್ ನ ಸಿ.ಆರ್.ಪಿ ಕಿರಣ್ ಮೆಟ್ರಿಕ್ ಮೇಳದ ಉದ್ದೇಶ ಮತ್ತು ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಗೆಳೆಯರ ಬಳಗದ ಅಧ್ಯಕ್ಷ ಪ್ರವೀಣ್ ಮತ್ತು ಸದಸ್ಯ ಪ್ರದೀಪ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶಾಂತಿವಾಸ್ ಉಪಸ್ಥಿತರಿದ್ದರು.

ಮಕ್ಕಳು, ಪೋಷಕರ ಸಹಕಾರದೊಂದಿಗೆ ತರಕಾರಿ, ಹಣ್ಣುಗಳು, ಪಾನೀಯಗಳು, ಐಸ್ ಕ್ರೀಮ್, ಅದೃಷ್ಟ ಚೀಟಿ ಆಟ, ಜೇನು ತುಪ್ಪ, ಉತ್ಪನ್ನ ವಸ್ತುಗಳು, ಲೇಖನ ಸಾಮಾಗ್ರಿ ಇತ್ಯಾದಿಗಳನ್ನು ಮಾರಾಟ ಮಾಡಿದರು. ಸಿಕ್ಕಿದ ಮೊತ್ತವನ್ನು ಎಲ್ಲಾ ಪೋಷಕರು ಶಾಲೆಗೆ ನೀಡುವುದೆಂದು ತೀರ್ಮಾನಿಸಿದರು. ಊರ ವಿದ್ಯಾಭಿಮಾನಿಗಳು ಕ್ಲಸ್ಟರ್ ಶಾಲೆಗಳ ಶಿಕ್ಷಕ ವೃಂದದವರು ಮೆಟ್ರಿಕ್ ಮೇಳದಲ್ಲಿ ಭಾಗವಹಿಸಿ ಆರ್ಥಿಕ ಸಹಕಾರವನ್ನು ನೀಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಮೆಟ್ರಿಕ್ ಮೇಳದಿಂದ ದೊರೆತ ಮೊತ್ತವನ್ನು ಶಾಲಾ ಅಕ್ಷರ ದಾಸೋಹ ಕೊಠಡಿಯ ಮೇಲ್ಚಾವಣಿಗೆ ಶೀಟ್ ಅಳವಡಿಸಲು ಉಪಯೋಗಿಸುವಂತೆ ತೀರ್ಮಾನಿಸಲಾಯಿತು. ಶಿಕ್ಷಕಿ ಕು. ಅನುಷಾ ನಿರೂಪಿಸಿ, ಶಿಕ್ಷಕಿ ಅನಿತಾ ವಂದಿಸಿದರು.

Related posts

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya
error: Content is protected !!