25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

ಕೊಯ್ಯೂರು : ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಲ್ ಕೊಯ್ಯೂರು ಇಲ್ಲಿಯ ಸದಸ್ಯರ ಕುಣಿತ ಭಜನೆಯಲ್ಲಿ ಕೆಲವೊಂದು ಸಣ್ಣಪುಟ್ಟ ಬದಲಾವಣೆಗಳನ್ನು ತಂದು ಕುಣಿತದಲ್ಲಿ ಒಂದು ಮಾದರಿ ತಂಡವನ್ನಾಗಿ ರೂಪಿಸಬೇಕೆನ್ನುವ ಉದ್ದೇಶದಿಂದ ಭಜನಾ ಮಂಡಳಿಯ ಹಿರಿಯ ಕಿರಿಯ ಸದಸ್ಯರುಗಳಿಗೆ ಮತ್ತು ಮಕ್ಕಳಿಗೆ ಕುಣಿತ ಭಜನೆಯ ಹೊಸ ತರಬೇತಿಯನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಣಿತ ಭಜನೆಯ ಗುರುಗಳಾದ ಸಂದೇಶ ಹಾಗೂ ಊರಿನ ಹಿರಿಯರು ಪ್ರಚಂಡಭಾನು ಭಟ್ ಪಾಂಬೆಲು ಇವರುಗಳು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿಗಳು, ಭಜನಾ ಮಂಡಳಿಯ ಅಧ್ಯಕ್ಷರು, ಗೌರವಾಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಕೋಶಾಧಿಕಾರಿಗಳು, ಭಜಕ ಆಸಕ್ತ ಸದಸ್ಯರುಗಳು ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

Related posts

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!