25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ತೆಂಕಕಾರಂದೂರು : ಮಾ.5 ರಂದು ಕಾಪಿನಡ್ಕ ಸ.ಕಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯಾನ್ ನೆರವೇರಿಸಿ ಶುಭ ಹಾರೈಸಿದರು. ನಾರಾವಿ ಮತ್ತು ಪೆರೋಡಿತ್ತಾಯ ಕಟ್ಟೆ ಕ್ಲಸ್ಟರ್ ನ ಸಿ.ಆರ್.ಪಿ ಕಿರಣ್ ಮೆಟ್ರಿಕ್ ಮೇಳದ ಉದ್ದೇಶ ಮತ್ತು ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಗೆಳೆಯರ ಬಳಗದ ಅಧ್ಯಕ್ಷ ಪ್ರವೀಣ್ ಮತ್ತು ಸದಸ್ಯ ಪ್ರದೀಪ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶಾಂತಿವಾಸ್ ಉಪಸ್ಥಿತರಿದ್ದರು.

ಮಕ್ಕಳು, ಪೋಷಕರ ಸಹಕಾರದೊಂದಿಗೆ ತರಕಾರಿ, ಹಣ್ಣುಗಳು, ಪಾನೀಯಗಳು, ಐಸ್ ಕ್ರೀಮ್, ಅದೃಷ್ಟ ಚೀಟಿ ಆಟ, ಜೇನು ತುಪ್ಪ, ಉತ್ಪನ್ನ ವಸ್ತುಗಳು, ಲೇಖನ ಸಾಮಾಗ್ರಿ ಇತ್ಯಾದಿಗಳನ್ನು ಮಾರಾಟ ಮಾಡಿದರು. ಸಿಕ್ಕಿದ ಮೊತ್ತವನ್ನು ಎಲ್ಲಾ ಪೋಷಕರು ಶಾಲೆಗೆ ನೀಡುವುದೆಂದು ತೀರ್ಮಾನಿಸಿದರು. ಊರ ವಿದ್ಯಾಭಿಮಾನಿಗಳು ಕ್ಲಸ್ಟರ್ ಶಾಲೆಗಳ ಶಿಕ್ಷಕ ವೃಂದದವರು ಮೆಟ್ರಿಕ್ ಮೇಳದಲ್ಲಿ ಭಾಗವಹಿಸಿ ಆರ್ಥಿಕ ಸಹಕಾರವನ್ನು ನೀಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಮೆಟ್ರಿಕ್ ಮೇಳದಿಂದ ದೊರೆತ ಮೊತ್ತವನ್ನು ಶಾಲಾ ಅಕ್ಷರ ದಾಸೋಹ ಕೊಠಡಿಯ ಮೇಲ್ಚಾವಣಿಗೆ ಶೀಟ್ ಅಳವಡಿಸಲು ಉಪಯೋಗಿಸುವಂತೆ ತೀರ್ಮಾನಿಸಲಾಯಿತು. ಶಿಕ್ಷಕಿ ಕು. ಅನುಷಾ ನಿರೂಪಿಸಿ, ಶಿಕ್ಷಕಿ ಅನಿತಾ ವಂದಿಸಿದರು.

Related posts

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!