September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ತೆಂಕಕಾರಂದೂರು : ಮಾ.5 ರಂದು ಕಾಪಿನಡ್ಕ ಸ.ಕಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯಾನ್ ನೆರವೇರಿಸಿ ಶುಭ ಹಾರೈಸಿದರು. ನಾರಾವಿ ಮತ್ತು ಪೆರೋಡಿತ್ತಾಯ ಕಟ್ಟೆ ಕ್ಲಸ್ಟರ್ ನ ಸಿ.ಆರ್.ಪಿ ಕಿರಣ್ ಮೆಟ್ರಿಕ್ ಮೇಳದ ಉದ್ದೇಶ ಮತ್ತು ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಗೆಳೆಯರ ಬಳಗದ ಅಧ್ಯಕ್ಷ ಪ್ರವೀಣ್ ಮತ್ತು ಸದಸ್ಯ ಪ್ರದೀಪ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶಾಂತಿವಾಸ್ ಉಪಸ್ಥಿತರಿದ್ದರು.

ಮಕ್ಕಳು, ಪೋಷಕರ ಸಹಕಾರದೊಂದಿಗೆ ತರಕಾರಿ, ಹಣ್ಣುಗಳು, ಪಾನೀಯಗಳು, ಐಸ್ ಕ್ರೀಮ್, ಅದೃಷ್ಟ ಚೀಟಿ ಆಟ, ಜೇನು ತುಪ್ಪ, ಉತ್ಪನ್ನ ವಸ್ತುಗಳು, ಲೇಖನ ಸಾಮಾಗ್ರಿ ಇತ್ಯಾದಿಗಳನ್ನು ಮಾರಾಟ ಮಾಡಿದರು. ಸಿಕ್ಕಿದ ಮೊತ್ತವನ್ನು ಎಲ್ಲಾ ಪೋಷಕರು ಶಾಲೆಗೆ ನೀಡುವುದೆಂದು ತೀರ್ಮಾನಿಸಿದರು. ಊರ ವಿದ್ಯಾಭಿಮಾನಿಗಳು ಕ್ಲಸ್ಟರ್ ಶಾಲೆಗಳ ಶಿಕ್ಷಕ ವೃಂದದವರು ಮೆಟ್ರಿಕ್ ಮೇಳದಲ್ಲಿ ಭಾಗವಹಿಸಿ ಆರ್ಥಿಕ ಸಹಕಾರವನ್ನು ನೀಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಮೆಟ್ರಿಕ್ ಮೇಳದಿಂದ ದೊರೆತ ಮೊತ್ತವನ್ನು ಶಾಲಾ ಅಕ್ಷರ ದಾಸೋಹ ಕೊಠಡಿಯ ಮೇಲ್ಚಾವಣಿಗೆ ಶೀಟ್ ಅಳವಡಿಸಲು ಉಪಯೋಗಿಸುವಂತೆ ತೀರ್ಮಾನಿಸಲಾಯಿತು. ಶಿಕ್ಷಕಿ ಕು. ಅನುಷಾ ನಿರೂಪಿಸಿ, ಶಿಕ್ಷಕಿ ಅನಿತಾ ವಂದಿಸಿದರು.

Related posts

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya

ಲಾರಿ-ಬೈಕ್ ನಡುವೆ ಅಪಘಾತ ; ಬೈಕ್ ಸವಾರ ಮೃತ್ಯು

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾ‌ರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!