September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

ಬೆಳ್ತಂಗಡಿ: ವರ್ತಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯು ಮಾ.4ರಂದು ಬೆಳ್ತಂಗಡಿ ಲೋಬೊ ಟವರ್ಸ್ ನಲ್ಲಿ ನಡೆಯಿತು.

ಸಭೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಗೊಂದಲ ಹಾಗೂ ಪರಿಹಾರದ ಚರ್ಚೆಯ ಬಗ್ಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯ ರಸ್ತೆಯಲ್ಲಿ ವರ್ತಕರಿಗೆ ಹಾಗೂ ಕಟ್ಟಡ ಮಾಲಿಕರ ಸಮಸ್ಯೆಯನ್ನು ಆಲಿಸಲು ಖುದ್ದಾಗಿ ಶಾಸಕರು ಕಾಮಗಾರಿ ವೀಕ್ಷಣೆ ಹಾಗೂ ಹೆದ್ದಾರಿ ಅಧಿಕಾರಿಗಳು, ಗುತ್ತಿಗೆದಾರರು, ಕಂದಾಯ ಇಲಾಖೆಯ ಅಧಿಕಾರಿಗಳು , ಜನ ಪ್ರತಿನಿಧಿಗಳೊಂದಿಗೆ ಜನ ಸಂಪರ್ಕ ಕಾರ್ಯಕ್ರಮ ಮಾ.10ರಂದು ನಡೆಸುದಾಗಿ ತೀರ್ಮಾನಿಸಲಾಯಿತು.


10:30ಗೆ ಬಂಟರ ಭವನ, 11.45ಕ್ಕೆ ವಾಣಿ ಕಾಲೇಜು ಸಮೀಪ , 12.00 ಕ್ಕೆ ಚರ್ಚ್ ರೋಡ್, 12.40 ಕ್ಕೆ ಅಯ್ಯಪ್ಪ ಮಂದಿರ ಸಮೀಪ, 1.30ಕ್ಕೆ ಮಾರಿಗುಡಿ ಸಮೀಪ. 2.O0ಕ್ಕೆ ಬೆಳ್ತಂಗಡಿ ಮೂರು ಮಾರ್ಗದ ಬಳಿ, 2.30ಕ್ಕೆ ಬೆಳ್ತಂಗಡಿ ಬಸ್ಸು ನಿಲ್ದಾಣ ಜನ ಸಂಪರ್ಕ ಕಾರ್ಯಕ್ರಮ ನಡೆಯಲಿದೆ.

ಹೆಚ್ಚಿನ ವರ್ತಕರು ಹಾಜರಿದ್ದು ತಮ್ಮ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿ ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ತಿಳಿಸಿದ್ದಾರೆ.

Related posts

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya
error: Content is protected !!