34.2 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪವು ಪತ್ತೆಯಾಗಿದ್ದು ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯ ಬಾವಿಯಲ್ಲಿ, ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ, ಹಾಗೂ ಕೊಕ್ಕಡ ಪೊಟ್ಲಡ್ಕ ಎಂಬಲ್ಲಿ ಮನೆಯ ಅಟ್ಟದಲ್ಲಿ ಮಾ.3 ರಂದು ಕಾಳಿಂಗ ಸರ್ಪವು ಪತ್ತೆಯಾಗಿದ್ದು , ಧರ್ಮಸ್ಥಳದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

ಕಳೆಂಜ ಗ್ರಾಮ ಕರ್ಮಾಜೆಯಲ್ಲಿ ಮನೆಯ ಬಾವಿಯಲ್ಲಿ, ಕಾಳಿಂಗ ಸರ್ಪವನ್ನು ನೋಡಿ ನಿಡ್ಲೆ ಘಟಕದ ಸಂಯೋಜಕರಾದ ಗಿರೀಶ್ ಗೌಡ ರವರು ಸ್ನೇಕ್ ಪ್ರಕಾಶ್ ರಿಗೆ ಕರೆ ಮಾಡಿ ತಿಳಿಸಿದಾಗ ಕೂಡಲೇ ಸ್ಥಳಕ್ಕೆ ಧಾವಿಸಿ ಕಾಳಿಂಗ ಸರ್ಪ ಹಾವನ್ನು ಹಿಡಿದು ಕಾಡಿಗೆ ಬಿಡಲಾಯಿತು. ಈ ಸಂದರ್ಭ ಕಳೆಂಜ ಘಟಕದ ಸಂಯೋಜಕಿಯಾದ ಆಶಾಲತಾ ಇದ್ದರು.


ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ ಕಾಳಿಂಗ ಸರ್ಪವು ಕಂಡು ಬಂದಿದ್ದು ಕೂಡಲೇ ಕೊಕ್ಕಡದ ಕಮಲಾಕ್ಷ ಗೌಡರವರು ಸ್ನೇಕ್ ಪ್ರಕಾಶ್ ರವರಿಗೆ ತಡರಾತ್ರಿ 1 ಗಂಟೆಗೆ ಕರೆ ಮಾಡಿ ತಿಳಿಸಿದಾಗ , ಪಿ ಜೆ ಪಾಪಚನ್ ರವರ ಜೊತೆ ಸ್ಥಳಕ್ಕೆ ತೆರಳಿ ಹಾವುವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

Related posts

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಗೌರವಾರ್ಪಣೆ

Suddi Udaya
error: Content is protected !!