July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪವು ಪತ್ತೆಯಾಗಿದ್ದು ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯ ಬಾವಿಯಲ್ಲಿ, ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ, ಹಾಗೂ ಕೊಕ್ಕಡ ಪೊಟ್ಲಡ್ಕ ಎಂಬಲ್ಲಿ ಮನೆಯ ಅಟ್ಟದಲ್ಲಿ ಮಾ.3 ರಂದು ಕಾಳಿಂಗ ಸರ್ಪವು ಪತ್ತೆಯಾಗಿದ್ದು , ಧರ್ಮಸ್ಥಳದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

ಕಳೆಂಜ ಗ್ರಾಮ ಕರ್ಮಾಜೆಯಲ್ಲಿ ಮನೆಯ ಬಾವಿಯಲ್ಲಿ, ಕಾಳಿಂಗ ಸರ್ಪವನ್ನು ನೋಡಿ ನಿಡ್ಲೆ ಘಟಕದ ಸಂಯೋಜಕರಾದ ಗಿರೀಶ್ ಗೌಡ ರವರು ಸ್ನೇಕ್ ಪ್ರಕಾಶ್ ರಿಗೆ ಕರೆ ಮಾಡಿ ತಿಳಿಸಿದಾಗ ಕೂಡಲೇ ಸ್ಥಳಕ್ಕೆ ಧಾವಿಸಿ ಕಾಳಿಂಗ ಸರ್ಪ ಹಾವನ್ನು ಹಿಡಿದು ಕಾಡಿಗೆ ಬಿಡಲಾಯಿತು. ಈ ಸಂದರ್ಭ ಕಳೆಂಜ ಘಟಕದ ಸಂಯೋಜಕಿಯಾದ ಆಶಾಲತಾ ಇದ್ದರು.


ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ ಕಾಳಿಂಗ ಸರ್ಪವು ಕಂಡು ಬಂದಿದ್ದು ಕೂಡಲೇ ಕೊಕ್ಕಡದ ಕಮಲಾಕ್ಷ ಗೌಡರವರು ಸ್ನೇಕ್ ಪ್ರಕಾಶ್ ರವರಿಗೆ ತಡರಾತ್ರಿ 1 ಗಂಟೆಗೆ ಕರೆ ಮಾಡಿ ತಿಳಿಸಿದಾಗ , ಪಿ ಜೆ ಪಾಪಚನ್ ರವರ ಜೊತೆ ಸ್ಥಳಕ್ಕೆ ತೆರಳಿ ಹಾವುವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

Related posts

ಎಸ್ಐಟಿ ಕಚೇರಿಗೆ ಮಟ್ಟಣ್ಣವರ್ ,ಜಯಂತ್ ಟಿ ತಂಡ ಆಗಮನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya
error: Content is protected !!