23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪವು ಪತ್ತೆಯಾಗಿದ್ದು ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯ ಬಾವಿಯಲ್ಲಿ, ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ, ಹಾಗೂ ಕೊಕ್ಕಡ ಪೊಟ್ಲಡ್ಕ ಎಂಬಲ್ಲಿ ಮನೆಯ ಅಟ್ಟದಲ್ಲಿ ಮಾ.3 ರಂದು ಕಾಳಿಂಗ ಸರ್ಪವು ಪತ್ತೆಯಾಗಿದ್ದು , ಧರ್ಮಸ್ಥಳದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

ಕಳೆಂಜ ಗ್ರಾಮ ಕರ್ಮಾಜೆಯಲ್ಲಿ ಮನೆಯ ಬಾವಿಯಲ್ಲಿ, ಕಾಳಿಂಗ ಸರ್ಪವನ್ನು ನೋಡಿ ನಿಡ್ಲೆ ಘಟಕದ ಸಂಯೋಜಕರಾದ ಗಿರೀಶ್ ಗೌಡ ರವರು ಸ್ನೇಕ್ ಪ್ರಕಾಶ್ ರಿಗೆ ಕರೆ ಮಾಡಿ ತಿಳಿಸಿದಾಗ ಕೂಡಲೇ ಸ್ಥಳಕ್ಕೆ ಧಾವಿಸಿ ಕಾಳಿಂಗ ಸರ್ಪ ಹಾವನ್ನು ಹಿಡಿದು ಕಾಡಿಗೆ ಬಿಡಲಾಯಿತು. ಈ ಸಂದರ್ಭ ಕಳೆಂಜ ಘಟಕದ ಸಂಯೋಜಕಿಯಾದ ಆಶಾಲತಾ ಇದ್ದರು.


ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ ಕಾಳಿಂಗ ಸರ್ಪವು ಕಂಡು ಬಂದಿದ್ದು ಕೂಡಲೇ ಕೊಕ್ಕಡದ ಕಮಲಾಕ್ಷ ಗೌಡರವರು ಸ್ನೇಕ್ ಪ್ರಕಾಶ್ ರವರಿಗೆ ತಡರಾತ್ರಿ 1 ಗಂಟೆಗೆ ಕರೆ ಮಾಡಿ ತಿಳಿಸಿದಾಗ , ಪಿ ಜೆ ಪಾಪಚನ್ ರವರ ಜೊತೆ ಸ್ಥಳಕ್ಕೆ ತೆರಳಿ ಹಾವುವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya
error: Content is protected !!