September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪವು ಪತ್ತೆಯಾಗಿದ್ದು ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯ ಬಾವಿಯಲ್ಲಿ, ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ, ಹಾಗೂ ಕೊಕ್ಕಡ ಪೊಟ್ಲಡ್ಕ ಎಂಬಲ್ಲಿ ಮನೆಯ ಅಟ್ಟದಲ್ಲಿ ಮಾ.3 ರಂದು ಕಾಳಿಂಗ ಸರ್ಪವು ಪತ್ತೆಯಾಗಿದ್ದು , ಧರ್ಮಸ್ಥಳದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

ಕಳೆಂಜ ಗ್ರಾಮ ಕರ್ಮಾಜೆಯಲ್ಲಿ ಮನೆಯ ಬಾವಿಯಲ್ಲಿ, ಕಾಳಿಂಗ ಸರ್ಪವನ್ನು ನೋಡಿ ನಿಡ್ಲೆ ಘಟಕದ ಸಂಯೋಜಕರಾದ ಗಿರೀಶ್ ಗೌಡ ರವರು ಸ್ನೇಕ್ ಪ್ರಕಾಶ್ ರಿಗೆ ಕರೆ ಮಾಡಿ ತಿಳಿಸಿದಾಗ ಕೂಡಲೇ ಸ್ಥಳಕ್ಕೆ ಧಾವಿಸಿ ಕಾಳಿಂಗ ಸರ್ಪ ಹಾವನ್ನು ಹಿಡಿದು ಕಾಡಿಗೆ ಬಿಡಲಾಯಿತು. ಈ ಸಂದರ್ಭ ಕಳೆಂಜ ಘಟಕದ ಸಂಯೋಜಕಿಯಾದ ಆಶಾಲತಾ ಇದ್ದರು.


ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ ಕಾಳಿಂಗ ಸರ್ಪವು ಕಂಡು ಬಂದಿದ್ದು ಕೂಡಲೇ ಕೊಕ್ಕಡದ ಕಮಲಾಕ್ಷ ಗೌಡರವರು ಸ್ನೇಕ್ ಪ್ರಕಾಶ್ ರವರಿಗೆ ತಡರಾತ್ರಿ 1 ಗಂಟೆಗೆ ಕರೆ ಮಾಡಿ ತಿಳಿಸಿದಾಗ , ಪಿ ಜೆ ಪಾಪಚನ್ ರವರ ಜೊತೆ ಸ್ಥಳಕ್ಕೆ ತೆರಳಿ ಹಾವುವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

Related posts

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಸಾಧನೆ

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya
error: Content is protected !!