July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

ಬಳಂಜ : ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ (ರಿ.), ಬಳಂಜ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು, ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆಯು ಮಾ. 08 ರಂದು ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಜರುಗಲಿದೆ.

ಬೆಳಿಗ್ಗೆ ಗಂಟೆ 7-00ರಿಂದ ಗಣಹೋಮ, 7-30 ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಗುರು ಪೂಜೆ, 8-30ಕ್ಕೆ ಶ್ರೀ ಸರ್ವೇಶ್ವರೀ ದೇವಿಯ ಪೂಜೆ, 10-00 ಕ್ಕೆ ಪಂಚಶ್ರೀ ಮಹಿಳಾ ಭಜನಾ ತಂಡ ಬಳಂಜ ಮತ್ತು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇವರಿಂದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಗಂಟೆ 11-00ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ 12-30 ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವಾರಂ, ಉಜಿರೆ ಶ್ರೀ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್, ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಊರ, ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ ಸುವರ್ಣ, ಮುಂಡೂರು ಶ್ರೀನಾಗ ಕಲ್ಲುರ್ಟಿ ದೈವಸ್ಥಾನ ಆಡಳಿತ ಮೊಕ್ತಸರರು ರಾಜೀವ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸೇವಾ ಸಂಘ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಶ್ರೀಮತಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರು ಶೋಭಾ ಕುಲಾಲ್, ಯುವವಾಹಿನಿ ಕೇಂದ್ರ ಸಮಿತಿ (ರಿ.) ಮಂಗಳೂರು ಅಧ್ಯಕ್ಷ ಹರೀಶ್ ಪೂಜಾರಿ, ಬೈಲಬರಿ, ಮಂಗಳೂರು ಸೋಮೇಶ್ವರ ಪುರಸಭೆ ಸದಸ್ಯ ಜಯ ಪೂಜಾರಿ, ದರ್ಖಾಸು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್ ಡಿ. ‘ಸುಧಾಮ’ ಬಳಂಜ ಭಾಗವಹಿಸಲಿದ್ದಾರೆ.

Related posts

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!