July 24, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

ಬೆಳ್ತಂಗಡಿ: ಕರ್ನಾಟಕ ರಾಜ್ಯದ ನೂತನ ಸರಕಾರ, ರಾಜ್ಯದ ಜನತೆಗಾಗಿ ಚನಾವಣಾ ಸಂಧರ್ಭದಲ್ಲಿ ನೀಡಿದ ಗ್ಯಾರಂಟಿಗಳನ್ನು, ಕೇವಲ 3 ತಿಂಗಳ ಒಳಗಾಗಿ ಅನುಷ್ಠಾನಗೊಳಿಸಿದ್ದು, ರಾಜ್ಯದ ಕೋಟ್ಯಾಂತರ ಬಡ ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಕ್ತಿ, ಗ್ರಹಲಕ್ಷ್ಮಿ, ಗ್ರಹಜ್ಯೋತಿ, ಅನ್ನಭಾಗ್ಯ, ಹಾಗೂ ಯುವನಿಧಿ ಕಾಠ್ಯಕ್ರಮಗಳು ನಿರೀಕ್ಷೆಗೂ ಮೀರಿ ಜನರಿಂದ ಸ್ವೀಕೃತವಾಗಿದೆ. ರಾಜ್ಯದ ಮಹಿಳೆಯರು ಈ ಎಲ್ಲಾ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದು, ಪದವೀಧರ ಯುವಕ ಯುವತಿಯರೂ ಫಲಾನುಭವಿ
ಗಳಾಗಿದ್ದಾರೆ. ರಾಜ್ಯ ಸರಕಾರ ವಾರ್ಷಿಕ 58,000/- ಕೋಟಿ ಹಣವನ್ನು ಈ ಕಾಯ೯ ಕ್ರಮಗಳಿಗೆ ಆಯವ್ಯಯದಲ್ಲಿ ಮೀಸಲಿರಿಸಿದೆ. ಫಲಾನುಭವಿ ಪ್ರತಿ ಕುಟುಂಬಗಳಿಗೂ ಮಾಸಿಕ 5000/- ದಂತೆ ವಾರ್ಷಿಕ 60,000/- ರೂ ಗಳವರೆಗಿನ ಪ್ರಯೋಜನ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದಾರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ರವರ ಒತ್ತಾಸೆಯ ಮೇರೆಗೆ ಇಡೀ ಸರಕಾರ ಶ್ರಮವಹಿಸಿ ಫಲಾನುಭವಿಗಳಿಗೆ ಯೋಜನೆ ತಲುಪುವಂತೆ ಶ್ರಮಿಸುತ್ತಿದ್ದಾರೆ. ಆದುದರಿಂದ ಫೆ.7, 9 ಹಾಗು 10ನೇ ಮಾರ್ಚ್‌ ನಲ್ಲಿ ಜಿಲ್ಲೆಯ 9 ತಾಲೂಕುಗಳಲ್ಲಿ ಗ್ಯಾರಂಟಿ ಸಮವೇಶಗಳನ್ನು ಹಮ್ಮಿಕೊಂಡಿದ್ದು ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರು, ಶಾಸಕರು ಪಾಲ್ಗೊಳ್ಳಲ್ಲಿದ್ದಾರೆ. ಈ ಎಲ್ಲಾ ಕಾಠ್ಯಕ್ರಮಗಳಿಗೆ ಸಿದ್ಧತೆ ನಡೆಸಿದ್ದು ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೆರೆ ನೀಡಿದ್ದಾರೆ.

Related posts

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya
error: Content is protected !!