April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

ಮಿತ್ತಬಾಗಿಲು: ಇಲ್ಲಿಯ ಮಿತ್ತಬಾಗಿಲು ಗ್ರಾಮದ ಮಸೀದಿ ಬಳಿ ಕಿಟ್ ಹಂಚುವ ವಿಚಾರದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದು ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿ ಘಟನೆ ಮಾ.4ರಂದು ನಡೆದಿದೆ.


ಮಿತ್ತಬಾಗಿಲು ನಿವಾಸಿ ಅಶ್ರಫ್ ಎಂಬವರು ನೀಡಿದ ದೂರಿನಲ್ಲಿ ಮಾ.4 ರಂದು ಸಂಜೆ ಮಿತ್ತಬಾಗಿಲು ಗ್ರಾಮದ ಮಸೀದಿ ಬಳಿ ಲೈಟಿಂಗ್ ಕೆಲಸ ಮಾಡಿಕೊಂಡಿದ್ದಾಗ, ಸ್ಥಳಕ್ಕೆ ಬಂದ ಸಿನಾನ್ ಮತ್ತು ಅದ್ದು @ಅಬ್ದುಲ್ ರಹಿಮಾನ್ ಎಂಬವರುಗಳು ಕಿಟ್ ಹಂಚುವ ವಿಚಾರದಲ್ಲಿ ತಕರಾರು ತೆಗೆದು, ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದು, ಕಬೀರ್ ಮತ್ತು ಚರಿಯಮೋನು ಮೈಲಾರ್ ಎಂಬವರುಗಳು, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆಶ್ರಫ್ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2024 ಕಲಂ: 504,506,324, 324, r/w 34 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


ಈ ಪ್ರಕರಣದಲ್ಲಿ ಪ್ರತಿದೂರು ನೀಡಿರುವ ಶ್ರೀಮತಿ ಜೈನಾಬ್ ಅವರು ತಾಲಿ ಉಮ್ಮರ್, ಸಪ್ವಾನ್, ಸಿನಾನ್,ಆಸಿಫ್, ಹಕೀಂ, ಟಿ.ಎ ಮಹಮ್ಮದ್ ಮತ್ತು ಇತರರು ತನ್ನ ಮನೆಗೆ ಅಕ್ರಮವಾಗಿ ಪ್ರವೇಶಿಸಿ, ನನಗೆ ಹಾಗೂ ನನ್ನ ಅಣ್ಣ ಅಬ್ದುಲ್ ರಹಿಮಾನ್ ಎಂಬವರಿಗೆ ಹಲ್ಲೆ ನಡೆಸಿ, ಅವ್ಯಾಚವಾಗಿ ಬೈದು, ಜೀವಬೆದರಿಕೆ ಹಾಕಿರುತ್ತಾರೆ ಎಂದು ಆರೋಪಿಸಿದ್ದಾರೆ. ಅವರು ನೀಡಿದ ದೂರಿನಂತೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 28/2024 ಕಲಂ: 143,147,504,506,448,354, r/w 149 , ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya
error: Content is protected !!