25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

ಮಿತ್ತಬಾಗಿಲು: ಇಲ್ಲಿಯ ಮಿತ್ತಬಾಗಿಲು ಗ್ರಾಮದ ಮಸೀದಿ ಬಳಿ ಕಿಟ್ ಹಂಚುವ ವಿಚಾರದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದು ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿ ಘಟನೆ ಮಾ.4ರಂದು ನಡೆದಿದೆ.


ಮಿತ್ತಬಾಗಿಲು ನಿವಾಸಿ ಅಶ್ರಫ್ ಎಂಬವರು ನೀಡಿದ ದೂರಿನಲ್ಲಿ ಮಾ.4 ರಂದು ಸಂಜೆ ಮಿತ್ತಬಾಗಿಲು ಗ್ರಾಮದ ಮಸೀದಿ ಬಳಿ ಲೈಟಿಂಗ್ ಕೆಲಸ ಮಾಡಿಕೊಂಡಿದ್ದಾಗ, ಸ್ಥಳಕ್ಕೆ ಬಂದ ಸಿನಾನ್ ಮತ್ತು ಅದ್ದು @ಅಬ್ದುಲ್ ರಹಿಮಾನ್ ಎಂಬವರುಗಳು ಕಿಟ್ ಹಂಚುವ ವಿಚಾರದಲ್ಲಿ ತಕರಾರು ತೆಗೆದು, ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದು, ಕಬೀರ್ ಮತ್ತು ಚರಿಯಮೋನು ಮೈಲಾರ್ ಎಂಬವರುಗಳು, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆಶ್ರಫ್ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2024 ಕಲಂ: 504,506,324, 324, r/w 34 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


ಈ ಪ್ರಕರಣದಲ್ಲಿ ಪ್ರತಿದೂರು ನೀಡಿರುವ ಶ್ರೀಮತಿ ಜೈನಾಬ್ ಅವರು ತಾಲಿ ಉಮ್ಮರ್, ಸಪ್ವಾನ್, ಸಿನಾನ್,ಆಸಿಫ್, ಹಕೀಂ, ಟಿ.ಎ ಮಹಮ್ಮದ್ ಮತ್ತು ಇತರರು ತನ್ನ ಮನೆಗೆ ಅಕ್ರಮವಾಗಿ ಪ್ರವೇಶಿಸಿ, ನನಗೆ ಹಾಗೂ ನನ್ನ ಅಣ್ಣ ಅಬ್ದುಲ್ ರಹಿಮಾನ್ ಎಂಬವರಿಗೆ ಹಲ್ಲೆ ನಡೆಸಿ, ಅವ್ಯಾಚವಾಗಿ ಬೈದು, ಜೀವಬೆದರಿಕೆ ಹಾಕಿರುತ್ತಾರೆ ಎಂದು ಆರೋಪಿಸಿದ್ದಾರೆ. ಅವರು ನೀಡಿದ ದೂರಿನಂತೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 28/2024 ಕಲಂ: 143,147,504,506,448,354, r/w 149 , ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya
error: Content is protected !!