25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

ಮಿತ್ತಬಾಗಿಲು: ಇಲ್ಲಿಯ ಮಿತ್ತಬಾಗಿಲು ಗ್ರಾಮದ ಮಸೀದಿ ಬಳಿ ಕಿಟ್ ಹಂಚುವ ವಿಚಾರದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದು ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿ ಘಟನೆ ಮಾ.4ರಂದು ನಡೆದಿದೆ.


ಮಿತ್ತಬಾಗಿಲು ನಿವಾಸಿ ಅಶ್ರಫ್ ಎಂಬವರು ನೀಡಿದ ದೂರಿನಲ್ಲಿ ಮಾ.4 ರಂದು ಸಂಜೆ ಮಿತ್ತಬಾಗಿಲು ಗ್ರಾಮದ ಮಸೀದಿ ಬಳಿ ಲೈಟಿಂಗ್ ಕೆಲಸ ಮಾಡಿಕೊಂಡಿದ್ದಾಗ, ಸ್ಥಳಕ್ಕೆ ಬಂದ ಸಿನಾನ್ ಮತ್ತು ಅದ್ದು @ಅಬ್ದುಲ್ ರಹಿಮಾನ್ ಎಂಬವರುಗಳು ಕಿಟ್ ಹಂಚುವ ವಿಚಾರದಲ್ಲಿ ತಕರಾರು ತೆಗೆದು, ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದು, ಕಬೀರ್ ಮತ್ತು ಚರಿಯಮೋನು ಮೈಲಾರ್ ಎಂಬವರುಗಳು, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆಶ್ರಫ್ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2024 ಕಲಂ: 504,506,324, 324, r/w 34 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


ಈ ಪ್ರಕರಣದಲ್ಲಿ ಪ್ರತಿದೂರು ನೀಡಿರುವ ಶ್ರೀಮತಿ ಜೈನಾಬ್ ಅವರು ತಾಲಿ ಉಮ್ಮರ್, ಸಪ್ವಾನ್, ಸಿನಾನ್,ಆಸಿಫ್, ಹಕೀಂ, ಟಿ.ಎ ಮಹಮ್ಮದ್ ಮತ್ತು ಇತರರು ತನ್ನ ಮನೆಗೆ ಅಕ್ರಮವಾಗಿ ಪ್ರವೇಶಿಸಿ, ನನಗೆ ಹಾಗೂ ನನ್ನ ಅಣ್ಣ ಅಬ್ದುಲ್ ರಹಿಮಾನ್ ಎಂಬವರಿಗೆ ಹಲ್ಲೆ ನಡೆಸಿ, ಅವ್ಯಾಚವಾಗಿ ಬೈದು, ಜೀವಬೆದರಿಕೆ ಹಾಕಿರುತ್ತಾರೆ ಎಂದು ಆರೋಪಿಸಿದ್ದಾರೆ. ಅವರು ನೀಡಿದ ದೂರಿನಂತೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 28/2024 ಕಲಂ: 143,147,504,506,448,354, r/w 149 , ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya
error: Content is protected !!