24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರಿನಿಂದ ಅಯೋಧ್ಯೆ ರಾಮಮಂದಿರಕ್ಕೆ ವಿಶೇಷ ರೈಲಿನ ಮೂಲಕ ಮಾ.6ರಂದು ಪ್ರಯಾಣ ಬೆಳೆಸಿದರು.

ತಂಡದ ಸಂಚಾಲಕ ಗಣೇಶ್ ನಾವೂರು ಇವರ ನೇತೃತ್ವದಲ್ಲಿ ಆಹಾರ ವಿಭಾಗದ ಪ್ರಮುಖ್ ಮಂಡಲದ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಸವಣಾಲು., ವಸತಿ ವಿಭಾಗದ ಪ್ರಮುಖ್ ತಣ್ಣೀರುಪಂತ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ದರ್ಶನ ವಿಭಾಗದ ಪ್ರಮುಖ್ ನವೀನ್ ನಿಡ್ಲೆ, ನೋಂದಾವಣಿ ವಿಭಾಗದ ಪ್ರಮುಖ್ ಬಾಲಕೃಷ್ಣ ಬೆಳಾಲು, ಮಾಜಿ ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ಮಾಜಿ ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ್ ರವರನ್ನು ಒಳಗೊಂಡ 52 ಜನರ ತಂಡ ಮಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರರವರು ಯಾತ್ರಾರ್ಥಿಗಳ ಪ್ರಯಾಣಕ್ಕೆ ಶುಭಕೋರಿದರು. ಈ ವೇಳೆ ಯಾತ್ರಾ ಸಂಪರ್ಕ ಪ್ರಮುಖ್ ಸೀತಾರಾಮ ಬೆಳಾಲು ಜೊತೆಗಿದ್ದರು.

Related posts

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಗೆ ಸುರೇಶ್ ಪೂಜಾರಿ ಹೇವರವರಿಂದ ಚಾಂಪಿಯನ್ ಟ್ರೋಫಿ ಹಸ್ತಾಂತರ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!