27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪವು ಪತ್ತೆಯಾಗಿದ್ದು ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯ ಬಾವಿಯಲ್ಲಿ, ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ, ಹಾಗೂ ಕೊಕ್ಕಡ ಪೊಟ್ಲಡ್ಕ ಎಂಬಲ್ಲಿ ಮನೆಯ ಅಟ್ಟದಲ್ಲಿ ಮಾ.3 ರಂದು ಕಾಳಿಂಗ ಸರ್ಪವು ಪತ್ತೆಯಾಗಿದ್ದು , ಧರ್ಮಸ್ಥಳದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

ಕಳೆಂಜ ಗ್ರಾಮ ಕರ್ಮಾಜೆಯಲ್ಲಿ ಮನೆಯ ಬಾವಿಯಲ್ಲಿ, ಕಾಳಿಂಗ ಸರ್ಪವನ್ನು ನೋಡಿ ನಿಡ್ಲೆ ಘಟಕದ ಸಂಯೋಜಕರಾದ ಗಿರೀಶ್ ಗೌಡ ರವರು ಸ್ನೇಕ್ ಪ್ರಕಾಶ್ ರಿಗೆ ಕರೆ ಮಾಡಿ ತಿಳಿಸಿದಾಗ ಕೂಡಲೇ ಸ್ಥಳಕ್ಕೆ ಧಾವಿಸಿ ಕಾಳಿಂಗ ಸರ್ಪ ಹಾವನ್ನು ಹಿಡಿದು ಕಾಡಿಗೆ ಬಿಡಲಾಯಿತು. ಈ ಸಂದರ್ಭ ಕಳೆಂಜ ಘಟಕದ ಸಂಯೋಜಕಿಯಾದ ಆಶಾಲತಾ ಇದ್ದರು.


ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ ಕಾಳಿಂಗ ಸರ್ಪವು ಕಂಡು ಬಂದಿದ್ದು ಕೂಡಲೇ ಕೊಕ್ಕಡದ ಕಮಲಾಕ್ಷ ಗೌಡರವರು ಸ್ನೇಕ್ ಪ್ರಕಾಶ್ ರವರಿಗೆ ತಡರಾತ್ರಿ 1 ಗಂಟೆಗೆ ಕರೆ ಮಾಡಿ ತಿಳಿಸಿದಾಗ , ಪಿ ಜೆ ಪಾಪಚನ್ ರವರ ಜೊತೆ ಸ್ಥಳಕ್ಕೆ ತೆರಳಿ ಹಾವುವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

Related posts

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!