24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪವು ಪತ್ತೆಯಾಗಿದ್ದು ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯ ಬಾವಿಯಲ್ಲಿ, ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ, ಹಾಗೂ ಕೊಕ್ಕಡ ಪೊಟ್ಲಡ್ಕ ಎಂಬಲ್ಲಿ ಮನೆಯ ಅಟ್ಟದಲ್ಲಿ ಮಾ.3 ರಂದು ಕಾಳಿಂಗ ಸರ್ಪವು ಪತ್ತೆಯಾಗಿದ್ದು , ಧರ್ಮಸ್ಥಳದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

ಕಳೆಂಜ ಗ್ರಾಮ ಕರ್ಮಾಜೆಯಲ್ಲಿ ಮನೆಯ ಬಾವಿಯಲ್ಲಿ, ಕಾಳಿಂಗ ಸರ್ಪವನ್ನು ನೋಡಿ ನಿಡ್ಲೆ ಘಟಕದ ಸಂಯೋಜಕರಾದ ಗಿರೀಶ್ ಗೌಡ ರವರು ಸ್ನೇಕ್ ಪ್ರಕಾಶ್ ರಿಗೆ ಕರೆ ಮಾಡಿ ತಿಳಿಸಿದಾಗ ಕೂಡಲೇ ಸ್ಥಳಕ್ಕೆ ಧಾವಿಸಿ ಕಾಳಿಂಗ ಸರ್ಪ ಹಾವನ್ನು ಹಿಡಿದು ಕಾಡಿಗೆ ಬಿಡಲಾಯಿತು. ಈ ಸಂದರ್ಭ ಕಳೆಂಜ ಘಟಕದ ಸಂಯೋಜಕಿಯಾದ ಆಶಾಲತಾ ಇದ್ದರು.


ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ ಕಾಳಿಂಗ ಸರ್ಪವು ಕಂಡು ಬಂದಿದ್ದು ಕೂಡಲೇ ಕೊಕ್ಕಡದ ಕಮಲಾಕ್ಷ ಗೌಡರವರು ಸ್ನೇಕ್ ಪ್ರಕಾಶ್ ರವರಿಗೆ ತಡರಾತ್ರಿ 1 ಗಂಟೆಗೆ ಕರೆ ಮಾಡಿ ತಿಳಿಸಿದಾಗ , ಪಿ ಜೆ ಪಾಪಚನ್ ರವರ ಜೊತೆ ಸ್ಥಳಕ್ಕೆ ತೆರಳಿ ಹಾವುವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

Related posts

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya
error: Content is protected !!