22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

ಬಳಂಜ : ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ (ರಿ.), ಬಳಂಜ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು, ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆಯು ಮಾ. 08 ರಂದು ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಜರುಗಲಿದೆ.

ಬೆಳಿಗ್ಗೆ ಗಂಟೆ 7-00ರಿಂದ ಗಣಹೋಮ, 7-30 ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಗುರು ಪೂಜೆ, 8-30ಕ್ಕೆ ಶ್ರೀ ಸರ್ವೇಶ್ವರೀ ದೇವಿಯ ಪೂಜೆ, 10-00 ಕ್ಕೆ ಪಂಚಶ್ರೀ ಮಹಿಳಾ ಭಜನಾ ತಂಡ ಬಳಂಜ ಮತ್ತು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇವರಿಂದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಗಂಟೆ 11-00ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ 12-30 ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವಾರಂ, ಉಜಿರೆ ಶ್ರೀ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್, ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ ಊರ, ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ ಸುವರ್ಣ, ಮುಂಡೂರು ಶ್ರೀನಾಗ ಕಲ್ಲುರ್ಟಿ ದೈವಸ್ಥಾನ ಆಡಳಿತ ಮೊಕ್ತಸರರು ರಾಜೀವ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸೇವಾ ಸಂಘ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಶ್ರೀಮತಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರು ಶೋಭಾ ಕುಲಾಲ್, ಯುವವಾಹಿನಿ ಕೇಂದ್ರ ಸಮಿತಿ (ರಿ.) ಮಂಗಳೂರು ಅಧ್ಯಕ್ಷ ಹರೀಶ್ ಪೂಜಾರಿ, ಬೈಲಬರಿ, ಮಂಗಳೂರು ಸೋಮೇಶ್ವರ ಪುರಸಭೆ ಸದಸ್ಯ ಜಯ ಪೂಜಾರಿ, ದರ್ಖಾಸು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್ ಡಿ. ‘ಸುಧಾಮ’ ಬಳಂಜ ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ “ಹೊಸ ಬ್ಯಾಚ್ ಆರಂಭೋತ್ಸವ”

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ

Suddi Udaya
error: Content is protected !!