April 1, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

ಬೆಳ್ತಂಗಡಿ: ಕರ್ನಾಟಕ ರಾಜ್ಯದ ನೂತನ ಸರಕಾರ, ರಾಜ್ಯದ ಜನತೆಗಾಗಿ ಚನಾವಣಾ ಸಂಧರ್ಭದಲ್ಲಿ ನೀಡಿದ ಗ್ಯಾರಂಟಿಗಳನ್ನು, ಕೇವಲ 3 ತಿಂಗಳ ಒಳಗಾಗಿ ಅನುಷ್ಠಾನಗೊಳಿಸಿದ್ದು, ರಾಜ್ಯದ ಕೋಟ್ಯಾಂತರ ಬಡ ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಕ್ತಿ, ಗ್ರಹಲಕ್ಷ್ಮಿ, ಗ್ರಹಜ್ಯೋತಿ, ಅನ್ನಭಾಗ್ಯ, ಹಾಗೂ ಯುವನಿಧಿ ಕಾಠ್ಯಕ್ರಮಗಳು ನಿರೀಕ್ಷೆಗೂ ಮೀರಿ ಜನರಿಂದ ಸ್ವೀಕೃತವಾಗಿದೆ. ರಾಜ್ಯದ ಮಹಿಳೆಯರು ಈ ಎಲ್ಲಾ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದು, ಪದವೀಧರ ಯುವಕ ಯುವತಿಯರೂ ಫಲಾನುಭವಿ
ಗಳಾಗಿದ್ದಾರೆ. ರಾಜ್ಯ ಸರಕಾರ ವಾರ್ಷಿಕ 58,000/- ಕೋಟಿ ಹಣವನ್ನು ಈ ಕಾಯ೯ ಕ್ರಮಗಳಿಗೆ ಆಯವ್ಯಯದಲ್ಲಿ ಮೀಸಲಿರಿಸಿದೆ. ಫಲಾನುಭವಿ ಪ್ರತಿ ಕುಟುಂಬಗಳಿಗೂ ಮಾಸಿಕ 5000/- ದಂತೆ ವಾರ್ಷಿಕ 60,000/- ರೂ ಗಳವರೆಗಿನ ಪ್ರಯೋಜನ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದಾರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ರವರ ಒತ್ತಾಸೆಯ ಮೇರೆಗೆ ಇಡೀ ಸರಕಾರ ಶ್ರಮವಹಿಸಿ ಫಲಾನುಭವಿಗಳಿಗೆ ಯೋಜನೆ ತಲುಪುವಂತೆ ಶ್ರಮಿಸುತ್ತಿದ್ದಾರೆ. ಆದುದರಿಂದ ಫೆ.7, 9 ಹಾಗು 10ನೇ ಮಾರ್ಚ್‌ ನಲ್ಲಿ ಜಿಲ್ಲೆಯ 9 ತಾಲೂಕುಗಳಲ್ಲಿ ಗ್ಯಾರಂಟಿ ಸಮವೇಶಗಳನ್ನು ಹಮ್ಮಿಕೊಂಡಿದ್ದು ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರು, ಶಾಸಕರು ಪಾಲ್ಗೊಳ್ಳಲ್ಲಿದ್ದಾರೆ. ಈ ಎಲ್ಲಾ ಕಾಠ್ಯಕ್ರಮಗಳಿಗೆ ಸಿದ್ಧತೆ ನಡೆಸಿದ್ದು ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೆರೆ ನೀಡಿದ್ದಾರೆ.

Related posts

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮಡಂತ್ಯಾರು; ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya
error: Content is protected !!