25.5 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

ಬೆಳ್ತಂಗಡಿ: ಕರ್ನಾಟಕ ರಾಜ್ಯದ ನೂತನ ಸರಕಾರ, ರಾಜ್ಯದ ಜನತೆಗಾಗಿ ಚನಾವಣಾ ಸಂಧರ್ಭದಲ್ಲಿ ನೀಡಿದ ಗ್ಯಾರಂಟಿಗಳನ್ನು, ಕೇವಲ 3 ತಿಂಗಳ ಒಳಗಾಗಿ ಅನುಷ್ಠಾನಗೊಳಿಸಿದ್ದು, ರಾಜ್ಯದ ಕೋಟ್ಯಾಂತರ ಬಡ ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಕ್ತಿ, ಗ್ರಹಲಕ್ಷ್ಮಿ, ಗ್ರಹಜ್ಯೋತಿ, ಅನ್ನಭಾಗ್ಯ, ಹಾಗೂ ಯುವನಿಧಿ ಕಾಠ್ಯಕ್ರಮಗಳು ನಿರೀಕ್ಷೆಗೂ ಮೀರಿ ಜನರಿಂದ ಸ್ವೀಕೃತವಾಗಿದೆ. ರಾಜ್ಯದ ಮಹಿಳೆಯರು ಈ ಎಲ್ಲಾ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದು, ಪದವೀಧರ ಯುವಕ ಯುವತಿಯರೂ ಫಲಾನುಭವಿ
ಗಳಾಗಿದ್ದಾರೆ. ರಾಜ್ಯ ಸರಕಾರ ವಾರ್ಷಿಕ 58,000/- ಕೋಟಿ ಹಣವನ್ನು ಈ ಕಾಯ೯ ಕ್ರಮಗಳಿಗೆ ಆಯವ್ಯಯದಲ್ಲಿ ಮೀಸಲಿರಿಸಿದೆ. ಫಲಾನುಭವಿ ಪ್ರತಿ ಕುಟುಂಬಗಳಿಗೂ ಮಾಸಿಕ 5000/- ದಂತೆ ವಾರ್ಷಿಕ 60,000/- ರೂ ಗಳವರೆಗಿನ ಪ್ರಯೋಜನ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದಾರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ರವರ ಒತ್ತಾಸೆಯ ಮೇರೆಗೆ ಇಡೀ ಸರಕಾರ ಶ್ರಮವಹಿಸಿ ಫಲಾನುಭವಿಗಳಿಗೆ ಯೋಜನೆ ತಲುಪುವಂತೆ ಶ್ರಮಿಸುತ್ತಿದ್ದಾರೆ. ಆದುದರಿಂದ ಫೆ.7, 9 ಹಾಗು 10ನೇ ಮಾರ್ಚ್‌ ನಲ್ಲಿ ಜಿಲ್ಲೆಯ 9 ತಾಲೂಕುಗಳಲ್ಲಿ ಗ್ಯಾರಂಟಿ ಸಮವೇಶಗಳನ್ನು ಹಮ್ಮಿಕೊಂಡಿದ್ದು ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರು, ಶಾಸಕರು ಪಾಲ್ಗೊಳ್ಳಲ್ಲಿದ್ದಾರೆ. ಈ ಎಲ್ಲಾ ಕಾಠ್ಯಕ್ರಮಗಳಿಗೆ ಸಿದ್ಧತೆ ನಡೆಸಿದ್ದು ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೆರೆ ನೀಡಿದ್ದಾರೆ.

Related posts

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya
error: Content is protected !!