April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

ಬಂಗಾಡಿ : ಕೊಲ್ಲಿ ಇಲ್ಲಿಯ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ – ಚಂದ್ರ ಜೋಡುಕರೆ ಬಯಲು ಕಂಬಳವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ – ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಾಗೂ ಯುವ ನಾಯಕ ರಂಜನ್ ಜಿ. ಗೌಡ ರವರ ಸಾರಥ್ಯದಲ್ಲಿ ಮಾ.9ರಂದು ಬೆಳಿಗ್ಗೆ 8-30ರಿಂದ ಬಂಗಾಡಿ ಕೊಲ್ಲಿಯ ನೇತ್ರಾವತಿ ನದಿ ಕಿನಾರೆಯ ವಿಶಾಲ ಪ್ರದೇಶದ ಕಂಬಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಂಬಳದ ಉದ್ಘಾಟನೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ನೆರವೇರಿಸಲಿದ್ದು, ಸಭಾಧ್ಯಕ್ಷತೆಯನ್ನು ಕಾಜೂರು ಆರ್.ಜೆ.ಎಂ ಉಪಾಧ್ಯಕ್ಷ ಬಬ್ರುದ್ದೀನ್ ವಹಿಸಲಿದ್ದಾರೆ. ಹಾಗೂ ಮುಖ್ಯ ಅತಿಥಿಗಳಾಗಿ ಶಾಸಕರು,ಸಂಸದರು, ರಾಜಕೀಯ ನಾಯಕರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಾಜಿ ಸಚಿವರಾದ ಕೆ. ಗಂಗಾಧರ ಗೌಡ ವಹಿಸಲಿದ್ದಾರೆ. ಹಾಗೂ ಅತಿಥಿಗಳಾಗಿ ರಾಜಕೀಯ ನಾಯಕರು, ವಿವಿಧ ಕ್ಷೇತ್ರದ ಗಣ್ಯರು, ಕಲಾ ಪ್ರೋತ್ಸಾಹಿಗಳು ಭಾಗವಹಿಸಲಿದ್ದಾರೆ.

ಬೆಳ್ತಂಗಡಿಯಲ್ಲಿ ಹೆಚ್ಚಾಗಿ ಕಂಬಳವನ್ನು ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಕಂಬಳ ಆರಂಭವಾಗಿರುವ ಉದ್ದೇಶ ಮನರಂಜನೆ ಹಿಂದಿನ ಕಾಲದಲ್ಲಿ ಗ್ರಾಮೀಣ ಪ್ರದೇಶದ ಜನರ ಮನರಂಜನೆಗಾಗಿ ಆಚರಿಸಲಾಗುತ್ತಿತ್ತು, ಆದರೆ ಈಗ ಇದು ಕ್ರೀಡೆಯಾಗಿ ಬದಲಾವಣೆಗೊಂಡಿದೆ. ಹಿಂದಿನ ಕಾಲದಲ್ಲಿ ಗ್ರಾಮೀಣ ಜನರು ಬಿಡುವಿಲ್ಲದೆ ಹೊಲ-ಗದ್ದೆಯಲ್ಲಿ ದುಡಿದು ಧನಿವಿರುವಾಗ ಆಯಾಸವನ್ನು ನೀಗಿಸುವ ಸಲುವಾಗಿ ಅಂದರೆ ಮೊದಲ ಹಂತದ ಗದ್ದೆ ಕೃಷಿ “ಸುಗ್ಗಿ” ಬೇಸಾಯ ನಂತರ ಕಂಬಳವನ್ನು ಮಾಡಲಾಗುತ್ತದೆ.

ಈ ಬಾರಿಯ ಕಂಬಳದಲ್ಲಿ ವಿಶೇಷವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ, ಪ್ರಗತಿಪರ ಕೃಷಿಕ ದೇವರಾಯ ರಾವ್, ಸಮಾಜ ಸೇವಕ ರಾಮಚಂದ್ರ ಶೆಟ್ಟಿ ಇವರಿಗೆ ಗುರುತಿಸುವಿಕೆ ಕಾರ್ಯಕ್ರಮ ನಡೆಯಲಿದೆ.

Related posts

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya
error: Content is protected !!