22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

ಬಂಗಾಡಿ : ಕೊಲ್ಲಿ ಇಲ್ಲಿಯ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ – ಚಂದ್ರ ಜೋಡುಕರೆ ಬಯಲು ಕಂಬಳವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ – ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಾಗೂ ಯುವ ನಾಯಕ ರಂಜನ್ ಜಿ. ಗೌಡ ರವರ ಸಾರಥ್ಯದಲ್ಲಿ ಮಾ.9ರಂದು ಬೆಳಿಗ್ಗೆ 8-30ರಿಂದ ಬಂಗಾಡಿ ಕೊಲ್ಲಿಯ ನೇತ್ರಾವತಿ ನದಿ ಕಿನಾರೆಯ ವಿಶಾಲ ಪ್ರದೇಶದ ಕಂಬಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಂಬಳದ ಉದ್ಘಾಟನೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ನೆರವೇರಿಸಲಿದ್ದು, ಸಭಾಧ್ಯಕ್ಷತೆಯನ್ನು ಕಾಜೂರು ಆರ್.ಜೆ.ಎಂ ಉಪಾಧ್ಯಕ್ಷ ಬಬ್ರುದ್ದೀನ್ ವಹಿಸಲಿದ್ದಾರೆ. ಹಾಗೂ ಮುಖ್ಯ ಅತಿಥಿಗಳಾಗಿ ಶಾಸಕರು,ಸಂಸದರು, ರಾಜಕೀಯ ನಾಯಕರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮಾಜಿ ಸಚಿವರಾದ ಕೆ. ಗಂಗಾಧರ ಗೌಡ ವಹಿಸಲಿದ್ದಾರೆ. ಹಾಗೂ ಅತಿಥಿಗಳಾಗಿ ರಾಜಕೀಯ ನಾಯಕರು, ವಿವಿಧ ಕ್ಷೇತ್ರದ ಗಣ್ಯರು, ಕಲಾ ಪ್ರೋತ್ಸಾಹಿಗಳು ಭಾಗವಹಿಸಲಿದ್ದಾರೆ.

ಬೆಳ್ತಂಗಡಿಯಲ್ಲಿ ಹೆಚ್ಚಾಗಿ ಕಂಬಳವನ್ನು ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಕಂಬಳ ಆರಂಭವಾಗಿರುವ ಉದ್ದೇಶ ಮನರಂಜನೆ ಹಿಂದಿನ ಕಾಲದಲ್ಲಿ ಗ್ರಾಮೀಣ ಪ್ರದೇಶದ ಜನರ ಮನರಂಜನೆಗಾಗಿ ಆಚರಿಸಲಾಗುತ್ತಿತ್ತು, ಆದರೆ ಈಗ ಇದು ಕ್ರೀಡೆಯಾಗಿ ಬದಲಾವಣೆಗೊಂಡಿದೆ. ಹಿಂದಿನ ಕಾಲದಲ್ಲಿ ಗ್ರಾಮೀಣ ಜನರು ಬಿಡುವಿಲ್ಲದೆ ಹೊಲ-ಗದ್ದೆಯಲ್ಲಿ ದುಡಿದು ಧನಿವಿರುವಾಗ ಆಯಾಸವನ್ನು ನೀಗಿಸುವ ಸಲುವಾಗಿ ಅಂದರೆ ಮೊದಲ ಹಂತದ ಗದ್ದೆ ಕೃಷಿ “ಸುಗ್ಗಿ” ಬೇಸಾಯ ನಂತರ ಕಂಬಳವನ್ನು ಮಾಡಲಾಗುತ್ತದೆ.

ಈ ಬಾರಿಯ ಕಂಬಳದಲ್ಲಿ ವಿಶೇಷವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ, ಪ್ರಗತಿಪರ ಕೃಷಿಕ ದೇವರಾಯ ರಾವ್, ಸಮಾಜ ಸೇವಕ ರಾಮಚಂದ್ರ ಶೆಟ್ಟಿ ಇವರಿಗೆ ಗುರುತಿಸುವಿಕೆ ಕಾರ್ಯಕ್ರಮ ನಡೆಯಲಿದೆ.

Related posts

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!