September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರಿನಿಂದ ಅಯೋಧ್ಯೆ ರಾಮಮಂದಿರಕ್ಕೆ ವಿಶೇಷ ರೈಲಿನ ಮೂಲಕ ಮಾ.6ರಂದು ಪ್ರಯಾಣ ಬೆಳೆಸಿದರು.

ತಂಡದ ಸಂಚಾಲಕ ಗಣೇಶ್ ನಾವೂರು ಇವರ ನೇತೃತ್ವದಲ್ಲಿ ಆಹಾರ ವಿಭಾಗದ ಪ್ರಮುಖ್ ಮಂಡಲದ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಸವಣಾಲು., ವಸತಿ ವಿಭಾಗದ ಪ್ರಮುಖ್ ತಣ್ಣೀರುಪಂತ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ದರ್ಶನ ವಿಭಾಗದ ಪ್ರಮುಖ್ ನವೀನ್ ನಿಡ್ಲೆ, ನೋಂದಾವಣಿ ವಿಭಾಗದ ಪ್ರಮುಖ್ ಬಾಲಕೃಷ್ಣ ಬೆಳಾಲು, ಮಾಜಿ ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ಮಾಜಿ ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ್ ರವರನ್ನು ಒಳಗೊಂಡ 52 ಜನರ ತಂಡ ಮಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರರವರು ಯಾತ್ರಾರ್ಥಿಗಳ ಪ್ರಯಾಣಕ್ಕೆ ಶುಭಕೋರಿದರು. ಈ ವೇಳೆ ಯಾತ್ರಾ ಸಂಪರ್ಕ ಪ್ರಮುಖ್ ಸೀತಾರಾಮ ಬೆಳಾಲು ಜೊತೆಗಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya
error: Content is protected !!