23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪವು ಪತ್ತೆಯಾಗಿದ್ದು ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯ ಬಾವಿಯಲ್ಲಿ, ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ, ಹಾಗೂ ಕೊಕ್ಕಡ ಪೊಟ್ಲಡ್ಕ ಎಂಬಲ್ಲಿ ಮನೆಯ ಅಟ್ಟದಲ್ಲಿ ಮಾ.3 ರಂದು ಕಾಳಿಂಗ ಸರ್ಪವು ಪತ್ತೆಯಾಗಿದ್ದು , ಧರ್ಮಸ್ಥಳದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

ಕಳೆಂಜ ಗ್ರಾಮ ಕರ್ಮಾಜೆಯಲ್ಲಿ ಮನೆಯ ಬಾವಿಯಲ್ಲಿ, ಕಾಳಿಂಗ ಸರ್ಪವನ್ನು ನೋಡಿ ನಿಡ್ಲೆ ಘಟಕದ ಸಂಯೋಜಕರಾದ ಗಿರೀಶ್ ಗೌಡ ರವರು ಸ್ನೇಕ್ ಪ್ರಕಾಶ್ ರಿಗೆ ಕರೆ ಮಾಡಿ ತಿಳಿಸಿದಾಗ ಕೂಡಲೇ ಸ್ಥಳಕ್ಕೆ ಧಾವಿಸಿ ಕಾಳಿಂಗ ಸರ್ಪ ಹಾವನ್ನು ಹಿಡಿದು ಕಾಡಿಗೆ ಬಿಡಲಾಯಿತು. ಈ ಸಂದರ್ಭ ಕಳೆಂಜ ಘಟಕದ ಸಂಯೋಜಕಿಯಾದ ಆಶಾಲತಾ ಇದ್ದರು.


ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ ಕಾಳಿಂಗ ಸರ್ಪವು ಕಂಡು ಬಂದಿದ್ದು ಕೂಡಲೇ ಕೊಕ್ಕಡದ ಕಮಲಾಕ್ಷ ಗೌಡರವರು ಸ್ನೇಕ್ ಪ್ರಕಾಶ್ ರವರಿಗೆ ತಡರಾತ್ರಿ 1 ಗಂಟೆಗೆ ಕರೆ ಮಾಡಿ ತಿಳಿಸಿದಾಗ , ಪಿ ಜೆ ಪಾಪಚನ್ ರವರ ಜೊತೆ ಸ್ಥಳಕ್ಕೆ ತೆರಳಿ ಹಾವುವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

Related posts

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!