23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪವು ಪತ್ತೆಯಾಗಿದ್ದು ಕಳೆಂಜ ಗ್ರಾಮ ಕರ್ಮಾಜೆ ಶೌರ್ಯ ಸ್ವಯಂ ಸೇವಕರಾದ ಆನಂದ ಎಂಬವರ ಮನೆಯ ಬಾವಿಯಲ್ಲಿ, ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ, ಹಾಗೂ ಕೊಕ್ಕಡ ಪೊಟ್ಲಡ್ಕ ಎಂಬಲ್ಲಿ ಮನೆಯ ಅಟ್ಟದಲ್ಲಿ ಮಾ.3 ರಂದು ಕಾಳಿಂಗ ಸರ್ಪವು ಪತ್ತೆಯಾಗಿದ್ದು , ಧರ್ಮಸ್ಥಳದ ಸ್ನೇಕ್ ಪ್ರಕಾಶ್ ರವರು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

ಕಳೆಂಜ ಗ್ರಾಮ ಕರ್ಮಾಜೆಯಲ್ಲಿ ಮನೆಯ ಬಾವಿಯಲ್ಲಿ, ಕಾಳಿಂಗ ಸರ್ಪವನ್ನು ನೋಡಿ ನಿಡ್ಲೆ ಘಟಕದ ಸಂಯೋಜಕರಾದ ಗಿರೀಶ್ ಗೌಡ ರವರು ಸ್ನೇಕ್ ಪ್ರಕಾಶ್ ರಿಗೆ ಕರೆ ಮಾಡಿ ತಿಳಿಸಿದಾಗ ಕೂಡಲೇ ಸ್ಥಳಕ್ಕೆ ಧಾವಿಸಿ ಕಾಳಿಂಗ ಸರ್ಪ ಹಾವನ್ನು ಹಿಡಿದು ಕಾಡಿಗೆ ಬಿಡಲಾಯಿತು. ಈ ಸಂದರ್ಭ ಕಳೆಂಜ ಘಟಕದ ಸಂಯೋಜಕಿಯಾದ ಆಶಾಲತಾ ಇದ್ದರು.


ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಳದ ಅರ್ಚಕರ ಮನೆಯಲ್ಲಿ ಕಾಳಿಂಗ ಸರ್ಪವು ಕಂಡು ಬಂದಿದ್ದು ಕೂಡಲೇ ಕೊಕ್ಕಡದ ಕಮಲಾಕ್ಷ ಗೌಡರವರು ಸ್ನೇಕ್ ಪ್ರಕಾಶ್ ರವರಿಗೆ ತಡರಾತ್ರಿ 1 ಗಂಟೆಗೆ ಕರೆ ಮಾಡಿ ತಿಳಿಸಿದಾಗ , ಪಿ ಜೆ ಪಾಪಚನ್ ರವರ ಜೊತೆ ಸ್ಥಳಕ್ಕೆ ತೆರಳಿ ಹಾವುವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya
error: Content is protected !!