March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.12: ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ) ಮಂಗಳೂರು ಮತ್ತು ಬೆಳ್ತಂಗಡಿ ತಾಲೂಕು ಮಹಿಳಾ ಒಕ್ಕೂಟ (ರಿ) ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಹಿಳಾ ಸಾಂತ್ವನ ಕೇಂದ್ರ, ಬೆಳ್ತಂಗಡಿ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ, ಬೆಳ್ತಂಗಡಿ ಮಹಿಳಾ ವೃಂದ (ರಿ) ಬೆಳ್ತಂಗಡಿ, ಪ್ರಗತಿ ಮಹಿಳಾ ಮಂಡಲ (ರಿ) ಉಜಿರೆ ಸ್ಪೂರ್ತಿ ಮಹಿಳಾ ಮಂಡಲ, ಮೇಲಂತಬೆಟ್ಟು, ವೈಭವಿ ಮಹಿಳಾ ಮಂಡಲ, ಕುವೆಟ್ಟು ಲೇಡಿ ಜೆ.ಸಿ., ಜೆ.ಸಿ.ಐ. ಬೆಳ್ತಂಗಡಿ ಮಂಜುಶ್ರೀ ಇವರ ಸಹಭಾಗಿತ್ವದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಹಾಗೂ ಮಹಿಳಾ ವಾಹನ ಜಾಥಾ ಮಾ.12 ರಂದು ಅಂಬೆಡ್ಕರ್ ಭವನ ದಿಂದ ಸುವರ್ಣ ಆರ್ಕೇಡ್ ವರೆಗೆ ನಡೆಯಲಿದೆ.

ಜಾಥಾ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ.

ದೀಪ ಪ್ರಜ್ವಲನೆಯನ್ನು ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಪ್ರಿಯಾ ಆಗ್ನೆಸ್ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಸವಿತಾ ಜಯದೇವ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಜಿರೆ ದಂತ ವೈದ್ಯರು ಡಾ| ದೀಪಾಲಿ ಡೋಂಗ್ರೆ, ಸುವರ್ಣ ಆರ್ಕೇಡ್ ಮಾಲಕರು ನಾಣ್ಯಪ್ಪ ಪೂಜಾರಿ, ದ.ಕ. ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮಂಗಳೂರು ಅಧ್ಯಕ್ಷೆ ಶ್ರೀಮತಿ ಚಂಚಲ ತೇಜೋಮಯ ಭಾಗವಹಿಸಲಿರುವರು.

Related posts

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಬೆಳ್ತಂಗಡಿ: ಸೇವಾಪ್ರತಿನಿಧಿಗಳ ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!