25.7 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

ಬೆಳ್ತಂಗಡಿ: ಕರ್ನಾಟಕ ರಾಜ್ಯದ ನೂತನ ಸರಕಾರ, ರಾಜ್ಯದ ಜನತೆಗಾಗಿ ಚನಾವಣಾ ಸಂಧರ್ಭದಲ್ಲಿ ನೀಡಿದ ಗ್ಯಾರಂಟಿಗಳನ್ನು, ಕೇವಲ 3 ತಿಂಗಳ ಒಳಗಾಗಿ ಅನುಷ್ಠಾನಗೊಳಿಸಿದ್ದು, ರಾಜ್ಯದ ಕೋಟ್ಯಾಂತರ ಬಡ ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಕ್ತಿ, ಗ್ರಹಲಕ್ಷ್ಮಿ, ಗ್ರಹಜ್ಯೋತಿ, ಅನ್ನಭಾಗ್ಯ, ಹಾಗೂ ಯುವನಿಧಿ ಕಾಠ್ಯಕ್ರಮಗಳು ನಿರೀಕ್ಷೆಗೂ ಮೀರಿ ಜನರಿಂದ ಸ್ವೀಕೃತವಾಗಿದೆ. ರಾಜ್ಯದ ಮಹಿಳೆಯರು ಈ ಎಲ್ಲಾ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದು, ಪದವೀಧರ ಯುವಕ ಯುವತಿಯರೂ ಫಲಾನುಭವಿ
ಗಳಾಗಿದ್ದಾರೆ. ರಾಜ್ಯ ಸರಕಾರ ವಾರ್ಷಿಕ 58,000/- ಕೋಟಿ ಹಣವನ್ನು ಈ ಕಾಯ೯ ಕ್ರಮಗಳಿಗೆ ಆಯವ್ಯಯದಲ್ಲಿ ಮೀಸಲಿರಿಸಿದೆ. ಫಲಾನುಭವಿ ಪ್ರತಿ ಕುಟುಂಬಗಳಿಗೂ ಮಾಸಿಕ 5000/- ದಂತೆ ವಾರ್ಷಿಕ 60,000/- ರೂ ಗಳವರೆಗಿನ ಪ್ರಯೋಜನ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದಾರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ರವರ ಒತ್ತಾಸೆಯ ಮೇರೆಗೆ ಇಡೀ ಸರಕಾರ ಶ್ರಮವಹಿಸಿ ಫಲಾನುಭವಿಗಳಿಗೆ ಯೋಜನೆ ತಲುಪುವಂತೆ ಶ್ರಮಿಸುತ್ತಿದ್ದಾರೆ. ಆದುದರಿಂದ ಫೆ.7, 9 ಹಾಗು 10ನೇ ಮಾರ್ಚ್‌ ನಲ್ಲಿ ಜಿಲ್ಲೆಯ 9 ತಾಲೂಕುಗಳಲ್ಲಿ ಗ್ಯಾರಂಟಿ ಸಮವೇಶಗಳನ್ನು ಹಮ್ಮಿಕೊಂಡಿದ್ದು ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರು, ಶಾಸಕರು ಪಾಲ್ಗೊಳ್ಳಲ್ಲಿದ್ದಾರೆ. ಈ ಎಲ್ಲಾ ಕಾಠ್ಯಕ್ರಮಗಳಿಗೆ ಸಿದ್ಧತೆ ನಡೆಸಿದ್ದು ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೆರೆ ನೀಡಿದ್ದಾರೆ.

Related posts

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಬಂಟ ಕ್ರೀಡೋತ್ಸವ

Suddi Udaya
error: Content is protected !!