September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದಬೆಟ್ಟು ಬಂಗಾಡಿ ಪ್ರೌಢ ಶಾಲೆಯ 10 ನೇ ತರಗತಿ ಮಕ್ಕಳಿಗೆ ವಿಶೇಷ ತರಗತಿಯನ್ನು ನಡೆಸಲಾಗಿದ್ದು ಇದರ ಸಮಾರೋಪ ಸಮಾರಂಭವನ್ನು ಬಂಗಾಡಿ ಪ್ರೌಢ ಶಾಲೆಯಲ್ಲಿ ನಡೆಸಲಾಯಿತು.

ಸಭೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ದೀಪಬೆಳಗಿಸಿ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಭವಿಷ್ಯಕ್ಕೆ ಎಸ್.ಎಸ್.ಎಲ್.ಸಿ ಯ ಅಂಕವೇ ಪ್ರಾಮುಖ್ಯವಾಗಿದ್ದು ಮಕ್ಕಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಂಡಿದ್ದು ಮಕ್ಕಳು ಇದರ ಪ್ರಯೋಜನವನ್ನು ಪಡೆದಿರುತ್ತೀರಿ. ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವಂತೆ ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಕಲಾ ರವರು ಶಾಲೆಯ ಮಕ್ಕಳಿಗೆ ಈ ಅವಕಾಶ ನೀಡಿದಕ್ಕಾಗಿ ಧನ್ಯವಾದ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾಬಿವೃದ್ಧಿ ಸಮಿತಿಯ ಅಧ್ಯಕ್ಷ ಉಮೇಶ್ ರವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕ್ಷೇತ್ರದಿಂದ ಶಾಲೆಗೆ ಉತ್ತಮ ಸಹಕಾರ ದೊರೆತಿದ್ದು ಎಲ್ಲಾ ಮಕ್ಕಳು ಉತ್ತಮ ಅಂಕಗಳಿಸುವಂತೆ ತಿಳಿಸಿದರು.

ತರಬೇತಿ ಪಡೆದ ವಿದ್ಯಾರ್ಥಿ ನಿಶಿತಾ ರವರು ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ಉಷಾ, ವಿಶೇಷ ತರಗತಿ ಶಿಕ್ಷಕಿ ಕವಿತಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್, ಸೇವಾಪ್ರತಿನಿಧಿ ಶೈಲ ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ಸೂಕ್ಷ್ಮ ವಲಯ ಪ್ರದೇಶ ಜಾರಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ; ತಹಶೀಲ್ದಾರರಿಗೆ ಮನವಿ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya
error: Content is protected !!