July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದಬೆಟ್ಟು ಬಂಗಾಡಿ ಪ್ರೌಢ ಶಾಲೆಯ 10 ನೇ ತರಗತಿ ಮಕ್ಕಳಿಗೆ ವಿಶೇಷ ತರಗತಿಯನ್ನು ನಡೆಸಲಾಗಿದ್ದು ಇದರ ಸಮಾರೋಪ ಸಮಾರಂಭವನ್ನು ಬಂಗಾಡಿ ಪ್ರೌಢ ಶಾಲೆಯಲ್ಲಿ ನಡೆಸಲಾಯಿತು.

ಸಭೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ದೀಪಬೆಳಗಿಸಿ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಭವಿಷ್ಯಕ್ಕೆ ಎಸ್.ಎಸ್.ಎಲ್.ಸಿ ಯ ಅಂಕವೇ ಪ್ರಾಮುಖ್ಯವಾಗಿದ್ದು ಮಕ್ಕಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಂಡಿದ್ದು ಮಕ್ಕಳು ಇದರ ಪ್ರಯೋಜನವನ್ನು ಪಡೆದಿರುತ್ತೀರಿ. ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವಂತೆ ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಕಲಾ ರವರು ಶಾಲೆಯ ಮಕ್ಕಳಿಗೆ ಈ ಅವಕಾಶ ನೀಡಿದಕ್ಕಾಗಿ ಧನ್ಯವಾದ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾಬಿವೃದ್ಧಿ ಸಮಿತಿಯ ಅಧ್ಯಕ್ಷ ಉಮೇಶ್ ರವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕ್ಷೇತ್ರದಿಂದ ಶಾಲೆಗೆ ಉತ್ತಮ ಸಹಕಾರ ದೊರೆತಿದ್ದು ಎಲ್ಲಾ ಮಕ್ಕಳು ಉತ್ತಮ ಅಂಕಗಳಿಸುವಂತೆ ತಿಳಿಸಿದರು.

ತರಬೇತಿ ಪಡೆದ ವಿದ್ಯಾರ್ಥಿ ನಿಶಿತಾ ರವರು ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ಉಷಾ, ವಿಶೇಷ ತರಗತಿ ಶಿಕ್ಷಕಿ ಕವಿತಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್, ಸೇವಾಪ್ರತಿನಿಧಿ ಶೈಲ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya
error: Content is protected !!