July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

ಧರ್ಮಸ್ಥಳ: ಶಿವರಾತ್ರಿ ಎಂಬುದು ತಾಳ್ಮೆ. ಸಂಯಮ, ಜಾಗರಣೆ, ಉಪವಾಸ, ವ್ರತ – ನಿಯಮಗಳ ಪಾಲನೆಯೊಂದಿಗೆ ಪಂಚೆಂದ್ರಿಯಗಳ ನಿಯಂತ್ರಣ ಮಾಡಿ ಎಲ್ಲರಿಗೂ ಮಾನಸಿಕ ಪರಿವರ್ತನೆಯ ಶುಭರಾತ್ರಿಯಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು.

ಅವರು ಮಾ.7ರಂದು ಧರ್ಮಸ್ಥಳದಲ್ಲಿ ಕಳೆದ 45 ವರ್ಷಗಳಿಂದ ಶಿವರಾತ್ರಿ ಸಂದರ್ಭ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರತಿವರ್ಷ ಪಾದಯಾತ್ರೆಯನ್ನು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಆಯೋಜಿಸುತ್ತಿರುವ ಹನುಮಂತಪ್ಪ ಸ್ವಾಮೀಜಿ ಮತ್ತು ಅವರ ಶಿಷ್ಯರನ್ನು ಗೌರವಿಸಿ ಅಭಿನಂದಿಸಿದರು.ಮುಂದೆ ನಿರ್ಧಿಷ್ಠ ಗುರಿ ಮತ್ತು ಹಿಂದೆ ಆದರ್ಶ ಗುರು ಇದ್ದಾಗ ಯಾವುದೇ ಕಾರ್ಯ ಯಶಸ್ವಿಯಾಗುತ್ತದೆ. ಪಾದಯಾತ್ರೆಯಲ್ಲಿ ಶ್ರದ್ಧಾ – ಭಕ್ತಿಯಿಂದ ಭಗವಂತನ ನಾಮಸ್ಮರಣೆಯೊಂದಿಗೆ ಕೆಟ್ಟ ಅಭ್ಯಾಸಗಳನ್ನು ಬಿಟ್ಟು ತ್ಯಾಗ ಮನೋಭಾವ ಮತ್ತು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಯುವಜನರು ಹೆಚ್ಚಾಗಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.

ಚಲನಚಿತ್ರ ನಿರ್ದೇಶಕ ಶಶಿಕುಮಾರ್, ನಾಗರಾಜ ರೆಡ್ಡಿ, ಕಮಲಾ. ಮೋಹನ ಗೌಡ, ಚಂದ್ರಪ್ಪ, ಹನುಂತರಾಯಪ್ಪ, ನರಸಿಂಹಪ್ಪ ಮತ್ತು ಮರಿಯಪ್ಪ ಅವರನ್ನು ಸನ್ಮಾನಿಸಲಾಯಿತು.ಪಾದಯಾತ್ರಿಗಳ ಕ್ಷೇತ್ರದರ್ಶನ ಸುಗಮವಾಗಲು ಸಹಕರಿಸಿದ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರನ್ನು ಪಾದಯಾತ್ರಿಗಳ ಪರವಾಗಿ ಗೌರವಿಸಲಾಯಿತು.

Related posts

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya
error: Content is protected !!