September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ಕಾರೊಂದು ಮಹಿಳೆಯ ಕಾಲಿನ ಮೇಲೆ ಹರಿದು ಹೋದ ಪರಿಣಾಮ ಕಾಲಿನ ಬೆರಳುಗಳಿಗೆ ರಕ್ತ ಗಾಯವಾದ ಘಟನೆ ಮಾ.5ರಂದು ವರದಿಯಾಗಿದೆ.

ಘಟನೆ ವಿವರ: ಚನ್ನರಾಯಪಟ್ಟಣ ತಾಲೂಕು, ಹಾಸನ ನಿವಾಸಿ ಶ್ರೀಮತಿ ರೇಖಾ ಸಿ.ಎಸ್ (39ವ) ಎಂಬವರ ದೂರಿನಂತೆ, ಸದ್ರಿಯವರು ತನ್ನ ನೆರೆಕೆರೆಯವರಾದ ಜಯಲಕ್ಷ್ಮಿ, ಮಂಜುಳಮ್ಮರವರುಗಳೊಂದಿಗೆ, ಮಾ.05 ರಂದು ರಾತ್ರಿ ದೇವರ ದರ್ಶನ ಮಾಡುವ ಸಲುವಾಗಿ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ನಿಂತುಕೊಂಡಿರುವಾಗ, KA52B9983 ನೇ ಕಾರನ್ನು ಅದರ ಚಾಲಕ ಮಣಿಕಂಠ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ರೇಖಾ ಸಿ.ಎಸ್. ರವರ ಎರಡು ಕಾಲಿನ ಮೇಲೆ ಕಾರಿನ ಚಕ್ರ ಹರಿದು ಹೋದ ಪರಿಣಾಮ, ರೇಖಾರವರ ಕಾಲಿನ ಬೆರಳುಗಳಿಗೆ ರಕ್ತಗಾಯವಾಗಿರುತ್ತದೆ.

ಅವರನ್ನು ಚಿಕಿತ್ಸೆಗಾಗಿ ಉಜಿರೆ ಎಸ್ ಡಿ ಎಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ, ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya
error: Content is protected !!