25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ಕಾರೊಂದು ಮಹಿಳೆಯ ಕಾಲಿನ ಮೇಲೆ ಹರಿದು ಹೋದ ಪರಿಣಾಮ ಕಾಲಿನ ಬೆರಳುಗಳಿಗೆ ರಕ್ತ ಗಾಯವಾದ ಘಟನೆ ಮಾ.5ರಂದು ವರದಿಯಾಗಿದೆ.

ಘಟನೆ ವಿವರ: ಚನ್ನರಾಯಪಟ್ಟಣ ತಾಲೂಕು, ಹಾಸನ ನಿವಾಸಿ ಶ್ರೀಮತಿ ರೇಖಾ ಸಿ.ಎಸ್ (39ವ) ಎಂಬವರ ದೂರಿನಂತೆ, ಸದ್ರಿಯವರು ತನ್ನ ನೆರೆಕೆರೆಯವರಾದ ಜಯಲಕ್ಷ್ಮಿ, ಮಂಜುಳಮ್ಮರವರುಗಳೊಂದಿಗೆ, ಮಾ.05 ರಂದು ರಾತ್ರಿ ದೇವರ ದರ್ಶನ ಮಾಡುವ ಸಲುವಾಗಿ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ನಿಂತುಕೊಂಡಿರುವಾಗ, KA52B9983 ನೇ ಕಾರನ್ನು ಅದರ ಚಾಲಕ ಮಣಿಕಂಠ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ರೇಖಾ ಸಿ.ಎಸ್. ರವರ ಎರಡು ಕಾಲಿನ ಮೇಲೆ ಕಾರಿನ ಚಕ್ರ ಹರಿದು ಹೋದ ಪರಿಣಾಮ, ರೇಖಾರವರ ಕಾಲಿನ ಬೆರಳುಗಳಿಗೆ ರಕ್ತಗಾಯವಾಗಿರುತ್ತದೆ.

ಅವರನ್ನು ಚಿಕಿತ್ಸೆಗಾಗಿ ಉಜಿರೆ ಎಸ್ ಡಿ ಎಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ, ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya
error: Content is protected !!