23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

ಬಳಂಜ: ಪ್ರತಿಷ್ಠಿತ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಬಳಂಜ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪೆನ್ನು ವಿತರಣೆ ಕಾರ್ಯಕ್ರಮವು ಮಾ.6ರಂದು ನಡೆಯಿತು.

ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ ಕರ್ನಾಟಕ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಲ್ಲೂ ಕಾರ್ಯಕ್ರಮಗಳನ್ನು ನೀಡಿ ಜನ ಮೆಚ್ಚುಗೆಯನ್ನು ಪಡೆದಿದ್ದು ಸ್ಥಳೀಯವಾಗಿ ಹಲವಾರು ಸಮಾಜಮುಖಿ ಸೇವೆಯನ್ನು ಮಾಡುತ್ತಿದೆ.

ಇದೀಗ ಮಂಡಳಿಯು ಮಹಾ ಶಿವರಾತ್ರಿಯ ಸಂದರ್ಭದಲ್ಲಿ 200ನೇ ಭಜನಾ ಕಾರ್ಯಕ್ರಮವನ್ನು ನೀಡುತ್ತಿದ್ದು ಇದರ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲು ಪೆನ್ನು ವಿತರಣೆ ಮಾಡಿರುವುದು ಶ್ಲಾಘನೀಯವಾಗಿದೆ ಎಂದು ಬಳಂಜ ಶಾಲಾ ಮುಖ್ಯೋಪಾದ್ಯಾಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಅಭಿಪ್ರಾಯ ಪಟ್ಟಿದ್ದಾರೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya
error: Content is protected !!