September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

ಬೆಳ್ತಂಗಡಿ: ಮಾರ್ಚ್ 9ರಂದು ಶನಿವಾರ ಪೂರ್ವಾಹ್ನ ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಂಗಣದಲ್ಲಿ ನಡೆಯಲಿರುವ ಸರ್ಕಾರದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತೀ ಗ್ರಾಮ ಪಂಚಾಯತಿಗೆ ಬಸ್ಸುಗಳನ್ನು ಒದಗಿಸಲಾಗಿದ್ದು ಮಾರ್ಗಸೂಚಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಗ್ರಾಮ ಪಂಚಾಯಿತಿಗಳಿಂದ ಬಸ್ಸುಗಳು ಹೊರಡಲಿದ್ದು ಸಮಾವೇಶ ಮುಗಿದ ಬಳಿಕ ಫಲಾನುಭವಿಗಳನ್ನು ವಾಪಾಸು ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ವಿವರಗಳಿಗೆ ಆಯಾ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ಕಾರ್ಯದರ್ಶಿ ಅಥವಾ ಅಂಗನವಾಡಿ ಕಾರ್ಯಕರ್ತೆಯವರನ್ನು ಸಂಪರ್ಕಿಸಬಹುದೆಂದು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎಸ್.ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ನೂತನ ಮುಖ್ಯಮಂತ್ರಿ ಡಿಕೆಶಿ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ: ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!