29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದಬೆಟ್ಟು ಬಂಗಾಡಿ ಪ್ರೌಢ ಶಾಲೆಯ 10 ನೇ ತರಗತಿ ಮಕ್ಕಳಿಗೆ ವಿಶೇಷ ತರಗತಿಯನ್ನು ನಡೆಸಲಾಗಿದ್ದು ಇದರ ಸಮಾರೋಪ ಸಮಾರಂಭವನ್ನು ಬಂಗಾಡಿ ಪ್ರೌಢ ಶಾಲೆಯಲ್ಲಿ ನಡೆಸಲಾಯಿತು.

ಸಭೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ದೀಪಬೆಳಗಿಸಿ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಭವಿಷ್ಯಕ್ಕೆ ಎಸ್.ಎಸ್.ಎಲ್.ಸಿ ಯ ಅಂಕವೇ ಪ್ರಾಮುಖ್ಯವಾಗಿದ್ದು ಮಕ್ಕಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಂಡಿದ್ದು ಮಕ್ಕಳು ಇದರ ಪ್ರಯೋಜನವನ್ನು ಪಡೆದಿರುತ್ತೀರಿ. ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವಂತೆ ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಕಲಾ ರವರು ಶಾಲೆಯ ಮಕ್ಕಳಿಗೆ ಈ ಅವಕಾಶ ನೀಡಿದಕ್ಕಾಗಿ ಧನ್ಯವಾದ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾಬಿವೃದ್ಧಿ ಸಮಿತಿಯ ಅಧ್ಯಕ್ಷ ಉಮೇಶ್ ರವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕ್ಷೇತ್ರದಿಂದ ಶಾಲೆಗೆ ಉತ್ತಮ ಸಹಕಾರ ದೊರೆತಿದ್ದು ಎಲ್ಲಾ ಮಕ್ಕಳು ಉತ್ತಮ ಅಂಕಗಳಿಸುವಂತೆ ತಿಳಿಸಿದರು.

ತರಬೇತಿ ಪಡೆದ ವಿದ್ಯಾರ್ಥಿ ನಿಶಿತಾ ರವರು ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ಉಷಾ, ವಿಶೇಷ ತರಗತಿ ಶಿಕ್ಷಕಿ ಕವಿತಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್, ಸೇವಾಪ್ರತಿನಿಧಿ ಶೈಲ ಉಪಸ್ಥಿತರಿದ್ದರು.

Related posts

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya
error: Content is protected !!