23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದಬೆಟ್ಟು ಬಂಗಾಡಿ ಪ್ರೌಢ ಶಾಲೆಯ 10 ನೇ ತರಗತಿ ಮಕ್ಕಳಿಗೆ ವಿಶೇಷ ತರಗತಿಯನ್ನು ನಡೆಸಲಾಗಿದ್ದು ಇದರ ಸಮಾರೋಪ ಸಮಾರಂಭವನ್ನು ಬಂಗಾಡಿ ಪ್ರೌಢ ಶಾಲೆಯಲ್ಲಿ ನಡೆಸಲಾಯಿತು.

ಸಭೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ದೀಪಬೆಳಗಿಸಿ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಭವಿಷ್ಯಕ್ಕೆ ಎಸ್.ಎಸ್.ಎಲ್.ಸಿ ಯ ಅಂಕವೇ ಪ್ರಾಮುಖ್ಯವಾಗಿದ್ದು ಮಕ್ಕಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಂಡಿದ್ದು ಮಕ್ಕಳು ಇದರ ಪ್ರಯೋಜನವನ್ನು ಪಡೆದಿರುತ್ತೀರಿ. ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವಂತೆ ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಕಲಾ ರವರು ಶಾಲೆಯ ಮಕ್ಕಳಿಗೆ ಈ ಅವಕಾಶ ನೀಡಿದಕ್ಕಾಗಿ ಧನ್ಯವಾದ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾಬಿವೃದ್ಧಿ ಸಮಿತಿಯ ಅಧ್ಯಕ್ಷ ಉಮೇಶ್ ರವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕ್ಷೇತ್ರದಿಂದ ಶಾಲೆಗೆ ಉತ್ತಮ ಸಹಕಾರ ದೊರೆತಿದ್ದು ಎಲ್ಲಾ ಮಕ್ಕಳು ಉತ್ತಮ ಅಂಕಗಳಿಸುವಂತೆ ತಿಳಿಸಿದರು.

ತರಬೇತಿ ಪಡೆದ ವಿದ್ಯಾರ್ಥಿ ನಿಶಿತಾ ರವರು ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ಉಷಾ, ವಿಶೇಷ ತರಗತಿ ಶಿಕ್ಷಕಿ ಕವಿತಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್, ಸೇವಾಪ್ರತಿನಿಧಿ ಶೈಲ ಉಪಸ್ಥಿತರಿದ್ದರು.

Related posts

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya
error: Content is protected !!