23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದಬೆಟ್ಟು ಬಂಗಾಡಿ ಪ್ರೌಢ ಶಾಲೆಯ 10 ನೇ ತರಗತಿ ಮಕ್ಕಳಿಗೆ ವಿಶೇಷ ತರಗತಿಯನ್ನು ನಡೆಸಲಾಗಿದ್ದು ಇದರ ಸಮಾರೋಪ ಸಮಾರಂಭವನ್ನು ಬಂಗಾಡಿ ಪ್ರೌಢ ಶಾಲೆಯಲ್ಲಿ ನಡೆಸಲಾಯಿತು.

ಸಭೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ದೀಪಬೆಳಗಿಸಿ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಭವಿಷ್ಯಕ್ಕೆ ಎಸ್.ಎಸ್.ಎಲ್.ಸಿ ಯ ಅಂಕವೇ ಪ್ರಾಮುಖ್ಯವಾಗಿದ್ದು ಮಕ್ಕಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಂಡಿದ್ದು ಮಕ್ಕಳು ಇದರ ಪ್ರಯೋಜನವನ್ನು ಪಡೆದಿರುತ್ತೀರಿ. ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವಂತೆ ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಕಲಾ ರವರು ಶಾಲೆಯ ಮಕ್ಕಳಿಗೆ ಈ ಅವಕಾಶ ನೀಡಿದಕ್ಕಾಗಿ ಧನ್ಯವಾದ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾಬಿವೃದ್ಧಿ ಸಮಿತಿಯ ಅಧ್ಯಕ್ಷ ಉಮೇಶ್ ರವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕ್ಷೇತ್ರದಿಂದ ಶಾಲೆಗೆ ಉತ್ತಮ ಸಹಕಾರ ದೊರೆತಿದ್ದು ಎಲ್ಲಾ ಮಕ್ಕಳು ಉತ್ತಮ ಅಂಕಗಳಿಸುವಂತೆ ತಿಳಿಸಿದರು.

ತರಬೇತಿ ಪಡೆದ ವಿದ್ಯಾರ್ಥಿ ನಿಶಿತಾ ರವರು ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ಉಷಾ, ವಿಶೇಷ ತರಗತಿ ಶಿಕ್ಷಕಿ ಕವಿತಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್, ಸೇವಾಪ್ರತಿನಿಧಿ ಶೈಲ ಉಪಸ್ಥಿತರಿದ್ದರು.

Related posts

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!