25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

ಉಜಿರೆ: ಉಜಿರೆಯ ಹಳೇ ಪೇಟೆ ಬಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಮಾ. 6ರಂದು ನಡೆದಿದೆ.

ಮಾ.6 ರಂದು ಉಜಿರೆ ಗ್ರಾಮದ ಹಳೆ ಪೇಟೆ ಬಳಿಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಬಿ.ಜಿ. ಸುಬ್ಬಾಪೂರ ಮಠ್ ರವರು ಠಾಣಾ ಸಿಬಂದಿಗಳೊಂದಿಗೆ, ಸದ್ರಿ ಸ್ಥಳಕ್ಕೆ ದಾಳಿ ನಡೆಸಿ, ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳಾದ, ರೇಣುಕಾ ಪ್ರಸಾದ್, ಅರಳೇ ಪೇಟೆ, ತುಮಕೂರು, ರಾಜೇಶ್ ಮೋಹನ್ ನಾಯರ್ ನಿಟ್ಟೆ ಕಾರ್ಕಳ, ನಿತಿನ್ ಕುಮಾರ್, ನೂರಾಲ್ ಬೆಟ್ಟು ಕಾರ್ಕಳ ಎಂಬವರುಗಳನ್ನು ವಶಕ್ಕೆ ಪಡೆದುಕೊಂಡು, ಸ್ಥಳದಲ್ಲಿದ್ದ ಪ್ರಕರಣದ ನೊಂದ ಮಹಿಳೆಯನ್ನು ಮಹಿಳಾ ಸಿಬ್ಬಂದಿಗಳ ಭದ್ರತೆಗೆ ಕೊಟ್ಟು, ಸದ್ರಿ ಆರೋಪಿಗಳ ವಿರುದ್ದ ಹಾಗೂ ದಾಳಿಯ ವೇಳೆ ಪರಾರಿಯಾದ ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 30/24 ಕಲಂ:3,4,5,5 (d) ITP ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya
error: Content is protected !!