26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

ಉಜಿರೆ: ಉಜಿರೆಯ ಹಳೇ ಪೇಟೆ ಬಳಿಯ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಮಾ. 6ರಂದು ನಡೆದಿದೆ.

ಮಾ.6 ರಂದು ಉಜಿರೆ ಗ್ರಾಮದ ಹಳೆ ಪೇಟೆ ಬಳಿಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಬಿ.ಜಿ. ಸುಬ್ಬಾಪೂರ ಮಠ್ ರವರು ಠಾಣಾ ಸಿಬಂದಿಗಳೊಂದಿಗೆ, ಸದ್ರಿ ಸ್ಥಳಕ್ಕೆ ದಾಳಿ ನಡೆಸಿ, ವೇಶ್ಯಾವಾಟಿಕೆ‌ ನಿರತರಾಗಿದ್ದ ಆರೋಪಿಗಳಾದ, ರೇಣುಕಾ ಪ್ರಸಾದ್, ಅರಳೇ ಪೇಟೆ, ತುಮಕೂರು, ರಾಜೇಶ್ ಮೋಹನ್ ನಾಯರ್ ನಿಟ್ಟೆ ಕಾರ್ಕಳ, ನಿತಿನ್ ಕುಮಾರ್, ನೂರಾಲ್ ಬೆಟ್ಟು ಕಾರ್ಕಳ ಎಂಬವರುಗಳನ್ನು ವಶಕ್ಕೆ ಪಡೆದುಕೊಂಡು, ಸ್ಥಳದಲ್ಲಿದ್ದ ಪ್ರಕರಣದ ನೊಂದ ಮಹಿಳೆಯನ್ನು ಮಹಿಳಾ ಸಿಬ್ಬಂದಿಗಳ ಭದ್ರತೆಗೆ ಕೊಟ್ಟು, ಸದ್ರಿ ಆರೋಪಿಗಳ ವಿರುದ್ದ ಹಾಗೂ ದಾಳಿಯ ವೇಳೆ ಪರಾರಿಯಾದ ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 30/24 ಕಲಂ:3,4,5,5 (d) ITP ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya
error: Content is protected !!