23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕಗೊಂಡಿದ್ದಾರೆ.

ಇವರು ರುಡ್ ಸೆಟ್,ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 560 ಕ್ಕು ಅಧಿಕ ಅರ್ ಸೆಟಿಗಳ ಸ್ಥಾಪನೆಗೆ ಅರ್ ಸೆಟಿ ಅದ್ಯಕ್ಷ ಡಾ ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರಮಿಸಿದ್ದರು.ಅರ್ ಸೆಟಿಗಳು ಪ್ರತಿವರ್ಷ 4 ಲಕ್ಷಕ್ಕು ಅಧಿಕ ನಿರುದ್ಯೋಗಿ ಯುವ ಜನತೆಗೆ ತರಬೇತಿ ನೀಡುತ್ತಿದ್ದು ಇದರಲ್ಲಿ ಪ್ರತಿ ವರ್ಷ 3 ಲಕ್ಷಕ್ಕು ಅಧಿಕ ಮಂದಿ ಸ್ವ ಉದ್ಯೋಗಿಗಳಾಗಿ ಸ್ವಂತ ಜೀವನ ನಡೆಸುತ್ತಾರೆ. ಸಿಂಡಿಕೇಟ್ ಬ್ಯಾಂಕ್ ನಲ್ಲಿಸತತ 35 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಇವರು ಬಳಿಕ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಅಲ್ಲದೆ ಪ್ರಸ್ತುತ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಬಾಸದಸ್ಯರ ಆಪ್ತ ಕಾರ್ಯದರ್ಶಿ ಯಾಗಿ ನೇಮಕಗೊಂಡಿದ್ದಾರೆ. ಇದೀಗ ಕೊಡಗು ವಿ ವಿ ಸಿಂಡಿಕೇಟ್ ಸದಸ್ಯರಾಗಿ ದೊಡ್ಡ ಗೌರವಕ್ಕೆ ಪಾತ್ರರಾಗಿದ್ದಾರೆ.

Related posts

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya
error: Content is protected !!