32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

ಧರ್ಮಸ್ಥಳ: ಶಿವರಾತ್ರಿ ಎಂಬುದು ತಾಳ್ಮೆ. ಸಂಯಮ, ಜಾಗರಣೆ, ಉಪವಾಸ, ವ್ರತ – ನಿಯಮಗಳ ಪಾಲನೆಯೊಂದಿಗೆ ಪಂಚೆಂದ್ರಿಯಗಳ ನಿಯಂತ್ರಣ ಮಾಡಿ ಎಲ್ಲರಿಗೂ ಮಾನಸಿಕ ಪರಿವರ್ತನೆಯ ಶುಭರಾತ್ರಿಯಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು.

ಅವರು ಮಾ.7ರಂದು ಧರ್ಮಸ್ಥಳದಲ್ಲಿ ಕಳೆದ 45 ವರ್ಷಗಳಿಂದ ಶಿವರಾತ್ರಿ ಸಂದರ್ಭ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರತಿವರ್ಷ ಪಾದಯಾತ್ರೆಯನ್ನು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಆಯೋಜಿಸುತ್ತಿರುವ ಹನುಮಂತಪ್ಪ ಸ್ವಾಮೀಜಿ ಮತ್ತು ಅವರ ಶಿಷ್ಯರನ್ನು ಗೌರವಿಸಿ ಅಭಿನಂದಿಸಿದರು.ಮುಂದೆ ನಿರ್ಧಿಷ್ಠ ಗುರಿ ಮತ್ತು ಹಿಂದೆ ಆದರ್ಶ ಗುರು ಇದ್ದಾಗ ಯಾವುದೇ ಕಾರ್ಯ ಯಶಸ್ವಿಯಾಗುತ್ತದೆ. ಪಾದಯಾತ್ರೆಯಲ್ಲಿ ಶ್ರದ್ಧಾ – ಭಕ್ತಿಯಿಂದ ಭಗವಂತನ ನಾಮಸ್ಮರಣೆಯೊಂದಿಗೆ ಕೆಟ್ಟ ಅಭ್ಯಾಸಗಳನ್ನು ಬಿಟ್ಟು ತ್ಯಾಗ ಮನೋಭಾವ ಮತ್ತು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಯುವಜನರು ಹೆಚ್ಚಾಗಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.

ಚಲನಚಿತ್ರ ನಿರ್ದೇಶಕ ಶಶಿಕುಮಾರ್, ನಾಗರಾಜ ರೆಡ್ಡಿ, ಕಮಲಾ. ಮೋಹನ ಗೌಡ, ಚಂದ್ರಪ್ಪ, ಹನುಂತರಾಯಪ್ಪ, ನರಸಿಂಹಪ್ಪ ಮತ್ತು ಮರಿಯಪ್ಪ ಅವರನ್ನು ಸನ್ಮಾನಿಸಲಾಯಿತು.ಪಾದಯಾತ್ರಿಗಳ ಕ್ಷೇತ್ರದರ್ಶನ ಸುಗಮವಾಗಲು ಸಹಕರಿಸಿದ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರನ್ನು ಪಾದಯಾತ್ರಿಗಳ ಪರವಾಗಿ ಗೌರವಿಸಲಾಯಿತು.

Related posts

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ-ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya
error: Content is protected !!