April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ಕಾರೊಂದು ಮಹಿಳೆಯ ಕಾಲಿನ ಮೇಲೆ ಹರಿದು ಹೋದ ಪರಿಣಾಮ ಕಾಲಿನ ಬೆರಳುಗಳಿಗೆ ರಕ್ತ ಗಾಯವಾದ ಘಟನೆ ಮಾ.5ರಂದು ವರದಿಯಾಗಿದೆ.

ಘಟನೆ ವಿವರ: ಚನ್ನರಾಯಪಟ್ಟಣ ತಾಲೂಕು, ಹಾಸನ ನಿವಾಸಿ ಶ್ರೀಮತಿ ರೇಖಾ ಸಿ.ಎಸ್ (39ವ) ಎಂಬವರ ದೂರಿನಂತೆ, ಸದ್ರಿಯವರು ತನ್ನ ನೆರೆಕೆರೆಯವರಾದ ಜಯಲಕ್ಷ್ಮಿ, ಮಂಜುಳಮ್ಮರವರುಗಳೊಂದಿಗೆ, ಮಾ.05 ರಂದು ರಾತ್ರಿ ದೇವರ ದರ್ಶನ ಮಾಡುವ ಸಲುವಾಗಿ, ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ದ್ವಾರದ ಬಳಿ ನಿಂತುಕೊಂಡಿರುವಾಗ, KA52B9983 ನೇ ಕಾರನ್ನು ಅದರ ಚಾಲಕ ಮಣಿಕಂಠ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ರೇಖಾ ಸಿ.ಎಸ್. ರವರ ಎರಡು ಕಾಲಿನ ಮೇಲೆ ಕಾರಿನ ಚಕ್ರ ಹರಿದು ಹೋದ ಪರಿಣಾಮ, ರೇಖಾರವರ ಕಾಲಿನ ಬೆರಳುಗಳಿಗೆ ರಕ್ತಗಾಯವಾಗಿರುತ್ತದೆ.

ಅವರನ್ನು ಚಿಕಿತ್ಸೆಗಾಗಿ ಉಜಿರೆ ಎಸ್ ಡಿ ಎಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂಬುದಾಗಿ, ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya
error: Content is protected !!